ರಾಜೀ ಸಂಧಾನದ ಮೂಲಕ ವ್ಯಾಜ್ಯ ಬಗೆಹರಿಸುಕೊಳ್ಳುವುದರಿಂದ ಸಮಯ ಮತ್ತು ಹಣ ಉಳಿತಾಯವಾಗುತ್ತದೆ. ಮಾನಸಿಕ ನೆಮ್ಮದಿಯೂ ನಮ್ಮದಾಗುತ್ತದೆ. ಅಲ್ಲದೆ ಕಕ್ಷಿದಾರರಲ್ಲಿ ಪರಸ್ಪರ ಸೌಹಾರ್ದ ಬೆಳೆಯುತ್ತದೆ. ಲೋಕ ಅದಾಲತ್ ಅನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಾಲ್ಲೂಕು ಕಾನೂನು ಸೇವೆ ಪ್ರಾಧಿಕಾರ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.