<p>ವಿಜಯಪುರ(ದೇವನಹಳ್ಳಿ): ವಿರೋಧ ಪಕ್ಷದವರು ಕಾಂಗ್ರೆಸ್ ಸರ್ಕಾರದ ಮೇಲೆ ಎಷ್ಟೇ ಆರೋಪ ಮಾಡಿದರೂ, ಅವೆಲ್ಲವೂ ನಮ್ಮ ಗೆಲುವಿನ ಮೆಟ್ಟಿಲು ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.</p>.<p>ಹೋಬಳಿಯ ವೆಂಕಟಗಿರಿಕೋಟೆ ಸೋಮವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ಅವರ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.</p>.<p>ದೇಶದಲ್ಲಿ 60 ವರ್ಷ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ನಿಂ ಎಷ್ಟು ಅಭಿವೃದ್ಧಿಯಾಗಿದೆ, 10 ವರ್ಷಗಳಲ್ಲಿ ಬಿಜೆಪಿಯ ದುರಾಡಳಿತ ಹೇಗಿದೆ, ಎನ್ನುವುದನ್ನು ಜನ ಯೋಚನೆ ಮಾಡಿದ್ದಾರೆ. ಈ ಹಿಂದೆ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ಅಗತ್ಯ ವಸ್ತುಗಳ ಬೆಲೆಗಳು ಹೇಗಿದ್ದವು. ಈಗ ಹೇಗಿವೆ ಎನ್ನುವ ಬಗ್ಗೆಯೂ ಚಿಂತನೆ ಮಾಡಿದ್ದಾರೆ. ಜನರು ನಮ್ಮ ಪರವಾಗಿದ್ದಾರೆ ಎಂದು ತಿಳಿಸಿದರು.</p>.<p>ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಎಲ್ಲಾ ಮುನ್ಸೂಚನೆ ಸಿಕ್ಕಿದೆ. ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಹೇಳಿದರು.</p>.<p>ರಾಜ್ಯದ ಹೆಣ್ಣು ಮಕ್ಕಳು, ತಾಯಂದಿರು ಸ್ವಾಭಿಮಾನಿಗಳಿದ್ದಾರೆ. ಅವರು ಪಡೆದುಕೊಳ್ಳುತ್ತಿರುವ ಗ್ಯಾರಂಟಿ ಯೋಜನೆಗಳಿಗೆ ವಿರುದ್ಧವಾಗಿ ಮತ ಹಾಕಲಾರರು. ಅವರ ಆಶೀರ್ವಾದವೇ ನಮಗೆ ಶಕ್ತಿಯಾಗಲಿದೆ ಎನ್ನುವ ಅಚಲವಾದ ವಿಶ್ವಾಸವಿದೆ ಎಂದರು.</p>.<p>ಕೆಪಿಸಿಸಿ ಸದಸ್ಯ ಚಿನ್ನಪ್ಪ, ಯುವ ಕಾಂಗ್ರೆಸ್ ಮುಖಂಡ ಆರ್.ಅಮರನಾಥ್ ಮಾತನಾಡಿದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ರಾಮಚಂದ್ರಪ್ಪ, ಮುಖಂಡ ವಿ.ರಾಮಕೃಷ್ಣಪ್ಪ, ಅಭ್ಯರ್ಥಿ ಸಹೋದರ ಸುಂದರ್ ರಾಮಯ್ಯ, ಮೂರ್ತಿ, ಸಜ್ಜದ್, ಮಹೇಶ್, ಮುನಿಬೈರಪ್ಪ, ದೇವರಾಜ್, ವೇಣುಗೋಪಾಲ್, ಹುರುಳುಗುರ್ಕಿ ರಾಜಣ್ಣ, ಶ್ರೀನಿವಾಸಮೂರ್ತಿ, ಚಿನ್ನಪ್ಪ, ತಿತ್ತಪ್ಪ, ಬುಡುತಪ್ಪ, ಗ್ಯಾಸ್ ಶ್ರೀನಿವಾಸ್, ವಿಶ್ವನಾಥ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ(ದೇವನಹಳ್ಳಿ): ವಿರೋಧ ಪಕ್ಷದವರು ಕಾಂಗ್ರೆಸ್ ಸರ್ಕಾರದ ಮೇಲೆ ಎಷ್ಟೇ ಆರೋಪ ಮಾಡಿದರೂ, ಅವೆಲ್ಲವೂ ನಮ್ಮ ಗೆಲುವಿನ ಮೆಟ್ಟಿಲು ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.</p>.<p>ಹೋಬಳಿಯ ವೆಂಕಟಗಿರಿಕೋಟೆ ಸೋಮವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ಅವರ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.</p>.<p>ದೇಶದಲ್ಲಿ 60 ವರ್ಷ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ನಿಂ ಎಷ್ಟು ಅಭಿವೃದ್ಧಿಯಾಗಿದೆ, 10 ವರ್ಷಗಳಲ್ಲಿ ಬಿಜೆಪಿಯ ದುರಾಡಳಿತ ಹೇಗಿದೆ, ಎನ್ನುವುದನ್ನು ಜನ ಯೋಚನೆ ಮಾಡಿದ್ದಾರೆ. ಈ ಹಿಂದೆ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ಅಗತ್ಯ ವಸ್ತುಗಳ ಬೆಲೆಗಳು ಹೇಗಿದ್ದವು. ಈಗ ಹೇಗಿವೆ ಎನ್ನುವ ಬಗ್ಗೆಯೂ ಚಿಂತನೆ ಮಾಡಿದ್ದಾರೆ. ಜನರು ನಮ್ಮ ಪರವಾಗಿದ್ದಾರೆ ಎಂದು ತಿಳಿಸಿದರು.</p>.<p>ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಎಲ್ಲಾ ಮುನ್ಸೂಚನೆ ಸಿಕ್ಕಿದೆ. ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಹೇಳಿದರು.</p>.<p>ರಾಜ್ಯದ ಹೆಣ್ಣು ಮಕ್ಕಳು, ತಾಯಂದಿರು ಸ್ವಾಭಿಮಾನಿಗಳಿದ್ದಾರೆ. ಅವರು ಪಡೆದುಕೊಳ್ಳುತ್ತಿರುವ ಗ್ಯಾರಂಟಿ ಯೋಜನೆಗಳಿಗೆ ವಿರುದ್ಧವಾಗಿ ಮತ ಹಾಕಲಾರರು. ಅವರ ಆಶೀರ್ವಾದವೇ ನಮಗೆ ಶಕ್ತಿಯಾಗಲಿದೆ ಎನ್ನುವ ಅಚಲವಾದ ವಿಶ್ವಾಸವಿದೆ ಎಂದರು.</p>.<p>ಕೆಪಿಸಿಸಿ ಸದಸ್ಯ ಚಿನ್ನಪ್ಪ, ಯುವ ಕಾಂಗ್ರೆಸ್ ಮುಖಂಡ ಆರ್.ಅಮರನಾಥ್ ಮಾತನಾಡಿದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ರಾಮಚಂದ್ರಪ್ಪ, ಮುಖಂಡ ವಿ.ರಾಮಕೃಷ್ಣಪ್ಪ, ಅಭ್ಯರ್ಥಿ ಸಹೋದರ ಸುಂದರ್ ರಾಮಯ್ಯ, ಮೂರ್ತಿ, ಸಜ್ಜದ್, ಮಹೇಶ್, ಮುನಿಬೈರಪ್ಪ, ದೇವರಾಜ್, ವೇಣುಗೋಪಾಲ್, ಹುರುಳುಗುರ್ಕಿ ರಾಜಣ್ಣ, ಶ್ರೀನಿವಾಸಮೂರ್ತಿ, ಚಿನ್ನಪ್ಪ, ತಿತ್ತಪ್ಪ, ಬುಡುತಪ್ಪ, ಗ್ಯಾಸ್ ಶ್ರೀನಿವಾಸ್, ವಿಶ್ವನಾಥ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>