<p><strong>ದೇವನಹಳ್ಳಿ:</strong> ಪ್ರಧಾನಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಿರುವ ಶ್ರಮಕ್ಕೆ ಪ್ರತಿಫಲವಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವತ್ತ ನಮ್ಮೆಲ್ಲರ ಚಿತ್ತ ಇರಲಿ ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜು ಹೇಳಿದರು.</p>.<p>ತಾಲ್ಲೂಕಿನ ಮಾಳಿಗಾನಹಳ್ಳಿಯಲ್ಲಿ ಶನಿವಾರ ನೂತನ ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜು ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು. </p>.<p>ರಾಜ್ಯದ ರೈತರು, ಬಡವರು, ಹಿಂದುಳಿದ ವರ್ಗದವರ ಸರ್ವತೋಮುಖ ಅಭಿವೃದ್ಧಿಗೆ ಒಗ್ಗೂಡಿ ಶ್ರಮಿಸಿದಾಗ ಮಾತ್ರ ಅಭಿವೃದ್ಧಿಯೆಡೆಗೆ ರಾಜ್ಯ ಸಾಗಲಿದೆ ಎಂದರು.</p>.<p>ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಎ.ವಿ.ನಾರಾಯಣಸ್ವಾಮಿ ಮಾತನಾಡಿ, ಆತ್ಮನಿರ್ಭರ ಭಾರತ ಕಲ್ಪನೆ ಅಡಿಯಲ್ಲಿ ಭಾರತದ ಪ್ರತಿಯೊಬ್ಬರೂ ಸ್ವಾಲಂಬಿಯಾಗಬೇಕು ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಕಂಡಕ್ಟರ್ ನಾರಾಯಣಸ್ವಾಮಿ, ಶಿವುಪ್ರಸಾದ್, ದೇ.ಸು.ನಾಗರಾಜ್, ಅಂಬರೀಶ ಗೌಡ, ಎಚ್.ಎಂ ರವಿಕುಮಾರ್, ಸುಂದರೇಶ್, ಮಂಜುನಾಥ್, ವಿನೋದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ಪ್ರಧಾನಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಿರುವ ಶ್ರಮಕ್ಕೆ ಪ್ರತಿಫಲವಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವತ್ತ ನಮ್ಮೆಲ್ಲರ ಚಿತ್ತ ಇರಲಿ ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜು ಹೇಳಿದರು.</p>.<p>ತಾಲ್ಲೂಕಿನ ಮಾಳಿಗಾನಹಳ್ಳಿಯಲ್ಲಿ ಶನಿವಾರ ನೂತನ ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜು ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು. </p>.<p>ರಾಜ್ಯದ ರೈತರು, ಬಡವರು, ಹಿಂದುಳಿದ ವರ್ಗದವರ ಸರ್ವತೋಮುಖ ಅಭಿವೃದ್ಧಿಗೆ ಒಗ್ಗೂಡಿ ಶ್ರಮಿಸಿದಾಗ ಮಾತ್ರ ಅಭಿವೃದ್ಧಿಯೆಡೆಗೆ ರಾಜ್ಯ ಸಾಗಲಿದೆ ಎಂದರು.</p>.<p>ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಎ.ವಿ.ನಾರಾಯಣಸ್ವಾಮಿ ಮಾತನಾಡಿ, ಆತ್ಮನಿರ್ಭರ ಭಾರತ ಕಲ್ಪನೆ ಅಡಿಯಲ್ಲಿ ಭಾರತದ ಪ್ರತಿಯೊಬ್ಬರೂ ಸ್ವಾಲಂಬಿಯಾಗಬೇಕು ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಕಂಡಕ್ಟರ್ ನಾರಾಯಣಸ್ವಾಮಿ, ಶಿವುಪ್ರಸಾದ್, ದೇ.ಸು.ನಾಗರಾಜ್, ಅಂಬರೀಶ ಗೌಡ, ಎಚ್.ಎಂ ರವಿಕುಮಾರ್, ಸುಂದರೇಶ್, ಮಂಜುನಾಥ್, ವಿನೋದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>