ರಾಷ್ಟ್ರೀಯ ಹೆದ್ದಾರಿ 7ರ ಬಳಿಯ ಅಮಾನಿಕೆರೆ ಬಳಿ ಖದೀರಮರ ತಂಡ ಕಬ್ಬಿಣದ ರಾಡ್ಗಳನ್ನು ಉಪಯೋಗಿಸಿ ಅಂಗಡಿಗೆ ಕನ್ನ ಹಾಕಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ, ಬೆಳ್ಳಗಿನ ಜಾವ ಹೆದ್ದಾರಿಯಲ್ಲಿ ಗಸ್ತು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಸಿಕ್ಕಿ ಬಿದ್ದಿದ್ದಾರೆ. ಬಂಧಿತರು ತೆಲಂಗಾಣ ರಾಜ್ಯದ ಪ್ರಕಾಶಂ ಜಿಲ್ಲೆಯವರಾಗಿದ್ದು, ಸುಮಲತಾ (24), ಅಂಕಮ್ಮ (30), ರಮ್ಯಾ (19) ಇಸ್ಮಾಯಿಲ್ (19) ಎಂಬುವರನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.