<p><strong>ಶಿಡ್ಲಘಟ್ಟ</strong>: ನಗರದ ದಿಬ್ಬೂರಹಳ್ಳಿ ಬೈಪಾಸ್ ರಸ್ತೆಯ ಪೂಜಮ್ಮ ದೇವಾಲಯ ವೃತ್ತದಲ್ಲಿ ಲಾರಿಯೊಂದು ಸೋಮವಾರ ಮುಂಜಾನೆ ಡಿಕ್ಕಿ ಹೊಡೆದು ಹೈ ಮಾಸ್ಟ್ ದೀಪದ ಕಂಬ ಉರುಳಿ ಬಿದ್ದಿದೆ. ಮುಂಜಾನೆ ಹೆಚ್ಚು ಸಂಚಾರ ಇಲ್ಲವಾದ್ದರಿಂದ ಅಪಾಯ ತಪ್ಪಿದೆ.</p>.<p>ಸೋಮವಾರ ಮುಂಜಾನೆ ಸುಮಾರು 4 ಗಂಟೆಗೆ ಲಾರಿಯೊಂದು ಅತಿ ವೇಗವಾಗಿ ಬಂದು ಹೈ ಮಾಸ್ಟ್ ವಿದ್ಯುತ್ ದೀಪಗಳ ಕಂಬಕ್ಕೆ ಡಿಕ್ಕಿ ಹೊಡೆದಿದ್ದು ಹೈ ಮಾಸ್ಟ್ ವಿದ್ಯುತ್ ದೀಪಗಳ ಕಂಬವು ಉರುಳಿ ಬಿದ್ದಿರುವ ದೃಶ್ಯವು ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.</p>.<p>ಸಫಾಯಿ ಕರ್ಮಚಾರಿ ಕಾಲೋನಿ ಸಮಗ್ರ ಅಭಿವೃದ್ದಿ ಯೋಜನೆಯಡಿ ಈ ಹೈ ಮಾಸ್ಟ್ ವಿದ್ಯುತ್ ದೀಪದ ಕಂಬವನ್ನು ಕಳೆದ ವರ್ಷವಷ್ಟೆ ಅಳವಡಿಸಲಾಗಿತ್ತು.</p>.<p>ನಗರಸಭೆ ಅಧ್ಯಕ್ಷ ಎಂ.ವೆಂಕಟಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು.</p>.<p>ಸಿಸಿಟಿವಿ ಕ್ಯಾಮೆರಾದ ಸೆರೆಯಾದ ದೃಶ್ಯ ಪರಿಶೀಲಿಸಿದರು. ಕೂಡಲೆ ನಗರಸಭೆ ಸಿಬ್ಬಂದಿಯಿಂದ ವಿದ್ಯುತ್ ಕಂಬವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.</p>.<p>ಲಾರಿ ಮತ್ತು ಚಾಲಕನ ವಿಳಾಸ ಪತ್ತೆ ಮಾಡಿ ದೂರು ನೀಡುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು. </p>.<p>ಮತ್ತೆ ಹೈ ಮಾಸ್ಟ್ ವಿದ್ಯುತ್ ದೀಪ ಅಳವಡಿಸಲಾಗುವುದಾಗಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ</strong>: ನಗರದ ದಿಬ್ಬೂರಹಳ್ಳಿ ಬೈಪಾಸ್ ರಸ್ತೆಯ ಪೂಜಮ್ಮ ದೇವಾಲಯ ವೃತ್ತದಲ್ಲಿ ಲಾರಿಯೊಂದು ಸೋಮವಾರ ಮುಂಜಾನೆ ಡಿಕ್ಕಿ ಹೊಡೆದು ಹೈ ಮಾಸ್ಟ್ ದೀಪದ ಕಂಬ ಉರುಳಿ ಬಿದ್ದಿದೆ. ಮುಂಜಾನೆ ಹೆಚ್ಚು ಸಂಚಾರ ಇಲ್ಲವಾದ್ದರಿಂದ ಅಪಾಯ ತಪ್ಪಿದೆ.</p>.<p>ಸೋಮವಾರ ಮುಂಜಾನೆ ಸುಮಾರು 4 ಗಂಟೆಗೆ ಲಾರಿಯೊಂದು ಅತಿ ವೇಗವಾಗಿ ಬಂದು ಹೈ ಮಾಸ್ಟ್ ವಿದ್ಯುತ್ ದೀಪಗಳ ಕಂಬಕ್ಕೆ ಡಿಕ್ಕಿ ಹೊಡೆದಿದ್ದು ಹೈ ಮಾಸ್ಟ್ ವಿದ್ಯುತ್ ದೀಪಗಳ ಕಂಬವು ಉರುಳಿ ಬಿದ್ದಿರುವ ದೃಶ್ಯವು ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.</p>.<p>ಸಫಾಯಿ ಕರ್ಮಚಾರಿ ಕಾಲೋನಿ ಸಮಗ್ರ ಅಭಿವೃದ್ದಿ ಯೋಜನೆಯಡಿ ಈ ಹೈ ಮಾಸ್ಟ್ ವಿದ್ಯುತ್ ದೀಪದ ಕಂಬವನ್ನು ಕಳೆದ ವರ್ಷವಷ್ಟೆ ಅಳವಡಿಸಲಾಗಿತ್ತು.</p>.<p>ನಗರಸಭೆ ಅಧ್ಯಕ್ಷ ಎಂ.ವೆಂಕಟಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು.</p>.<p>ಸಿಸಿಟಿವಿ ಕ್ಯಾಮೆರಾದ ಸೆರೆಯಾದ ದೃಶ್ಯ ಪರಿಶೀಲಿಸಿದರು. ಕೂಡಲೆ ನಗರಸಭೆ ಸಿಬ್ಬಂದಿಯಿಂದ ವಿದ್ಯುತ್ ಕಂಬವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.</p>.<p>ಲಾರಿ ಮತ್ತು ಚಾಲಕನ ವಿಳಾಸ ಪತ್ತೆ ಮಾಡಿ ದೂರು ನೀಡುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು. </p>.<p>ಮತ್ತೆ ಹೈ ಮಾಸ್ಟ್ ವಿದ್ಯುತ್ ದೀಪ ಅಳವಡಿಸಲಾಗುವುದಾಗಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>