ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೇಮ ವೈಫಲ್ಯ: ವಿದ್ಯಾರ್ಥಿ ಆತ್ಮಹತ್ಯೆ

Published 20 ಮಾರ್ಚ್ 2024, 14:24 IST
Last Updated 20 ಮಾರ್ಚ್ 2024, 14:24 IST
ಅಕ್ಷರ ಗಾತ್ರ

ಆನೇಕಲ್: ಕಾಲೇಜು ವಿದ್ಯಾರ್ಥಿಯೊಬ್ಬ ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬ್ಬಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯ ಗ್ರೀನ್‌ ಸಿಟಿ ಬಡಾವಣೆಯಲ್ಲಿ ಸೋಮವಾರ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಹರ್ಷಿತ್‌ (17) ಎಂದು ಗುರುತಿಸಲಾಗಿದೆ. ಹರ್ಷಿತ್‌ ಆನೇಕಲ್‌ ಎಎಸ್‌ಬಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಇದೇ ಕಾಲೇಜಿನ ವಿದ್ಯಾರ್ಥಿನಿಯೊಂದಿಗೆ ಪ್ರೀತಿಯಲ್ಲಿದ್ದ ಎನ್ನಲಾಗಿದೆ. ಹರ್ಷಿತ್ ಪ್ರೀತಿ ಮಾಡುತ್ತಿದ್ದ ವಿಚಾರ ವಿದ್ಯಾರ್ಥಿನಿಯ ಪೋಷಕರಿಗೆ ತಿಳಿದು ಅವರು ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ. 

ಹೆಬ್ಬಗೋಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT