ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಕೇಶ್ ಸಾವಿಗೆ ಯಾರು ಕಾರಣ: ನಾಗರಾಜ್ ಪ್ರಶ್ನೆ

Last Updated 22 ಸೆಪ್ಟೆಂಬರ್ 2019, 18:42 IST
ಅಕ್ಷರ ಗಾತ್ರ

ಬೆಂಗಳೂರು: ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಲೇ ಬಂದಿರುವ ಅನರ್ಹ ಶಾಸಕ ಎಂ.ಟಿ.ಬಿ.ನಾಗರಾಜ್, ಈಗ ಶಾಸಕ ರಮೇಶ್ ಕುಮಾರ್ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಪುತ್ರ ರಾಕೇಶ್ ಸಾವಿಗೆಶಾಸಕ ಭೈರತಿ ಸುರೇಶ್ ಕಾರಣ ಎಂದು ಆರೋಪಿಸಿದ್ದಾರೆ.

‘ರಾಕೇಶ್ ಇನ್ನೂ 50 ವರ್ಷದ ಬದುಕುತ್ತಿದ್ದರು. ಹೋಟೆಲ್‌ಗೆ ಕರೆದುಕೊಂಡು ಹೋಗಿ, ಕುಡಿಸಿ ಸಾಯಿಸಿದ್ದೇ ಆ ಬಚ್ಚಾ’ ಎಂದು ಹೆಬ್ಬಾಳ ಶಾಸಕ ಭೈರತಿ ಸುರೇಶ್ ವಿರುದ್ಧ ಪರೋಕ್ಷವಾಗಿ ಆರೋಪಿಸಿದ್ದಾರೆ.

‘ನನಗೆ ವಿಧಾನಸಭೆ ಟಿಕೆಟ್ ಕೊಟ್ಟು ಮಂತ್ರಿ ಮಾಡಿದ್ದೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ಎಷ್ಟು ಜನ ಕುರುಬರನ್ನು ಮಂತ್ರಿ ಮಾಡಿದ್ದಾರೆ. ಸಮಾಜದ ಹೆಸರು ಹೇಳಿಕೊಂಡು ಕೆಲಸ ಸಾಧಿಸಿಕೊಂಡಿದ್ದಾರೆ’ ಎಂದು ಟೀಕಿಸುವ ಮೂಲಕ ‘ನಾಗರಾಜ್ ನಾಗರಾವು’ ಎಂದು ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಸಂಸದಾರದ ಗುಟ್ಟು:

‘ಕಾಂಗ್ರೆಸ್‌ಗೆ ತಾಳಿಕಟ್ಟಿ, ಮತ್ತೊಬ್ಬರ ಜತೆ ಸಂಸಾರ ಮಾಡುತ್ತಿದ್ದಾರೆ’ ಎಂದು ಶಾಸಕ ರಮೇಶ್ ಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಅವರೇನು ಕಾಂಗ್ರೆಸ್‌ನಲ್ಲೇ ಮದುವೆಯಾಗಿದ್ದಾರೆಯೆ? ಜೆಡಿಎಸ್‌ನಲ್ಲಿ ಮದುವೆಯಾಗಿ, ಕಾಂಗ್ರೆಸ್‌ನಲ್ಲಿ ಸಂಸಾರ ಮಾಡುತ್ತಿದ್ದಾರೆ. ಪ್ರಾಮಾಣಿಕತೆ ಬಗ್ಗೆ ಮಾತನಾಡುತ್ತಾರೆ. ಆದರೆ ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡಿದ್ದು, ಎಲ್ಲರಿಗೂ ಗೊತ್ತಿದೆ’ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT