<p><strong>ಹೊಸಕೋಟೆ</strong>: ಸಮಾಜದ ಓರೆಕೋರೆ ತಿದ್ದುವಲ್ಲಿ ಪತ್ರಿಕಾರಂಗ ಮತ್ತು ಪೊಲೀಸ್ ಇಲಾಖೆ ಪಾತ್ರ ಮಹತ್ವದ್ದು ಎಂದು ಹೊಸಕೋಟೆ ಠಾಣೆ ಆರಕ್ಷಕ ನೀರೀಕ್ಷಕ ಗೋವಿಂದ್ ತಿಳಿಸಿದರು.</p>.<p>ನಗರದಲ್ಲಿ ಕರ್ನಾಟಕ ಸಂಪಾದಕರ ಮತ್ತು ವರದಿಗಾರರ ಸಂಘದ ಹಮ್ಮಿಕೊಂಡಿದ್ದ ಸಂಘದ ತಾಲ್ಲೂಕು ಘಟಕದ ಪತ್ರಕರ್ತರಿಗೆ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಪೊಲೀಸರು, ಪತ್ರಕರ್ತರು ಸಾರ್ವಜನಿಕರೊಂದಿಗೆ ದರ್ಪ ತೋರದೆ ಪ್ರೀತಿ, ವಿಶ್ವಾಸದಿಂದ ಜವಾಬ್ದಾರಿ ಅರಿತು ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಪತ್ರಕರ್ತರು ನೈಜ ಪ್ರಾಮಾಣಿಕವಾಗಿ ವರದಿ ಮಾಡಬೇಕಿದೆ. ರಾಜಕಾರಣಗಳು ಅಧಿಕಾರಿಗಳ ಬಳಿ ನ್ಯಾಯ ಸಿಗದಿದ್ದಾಗ ಕೊನೆಯದಾಗಿ ಮಾಧ್ಯಮದ ಬಳಿ ಬರುತ್ತಾರೆ. ಆ ನಿಟ್ಟಿನಲ್ಲಿ ಎಚ್ಚರಿಕೆಯಿಂದ ಕೆಲಸ ಮಾಡಬೇಕಿದೆ ಎಂದರು.<br> <br>ವಕೀಲರ ಸಂಘದ ಮಾಜಿ ಅಧ್ಯಕ್ಷ ಎಂ.ವೆಂಕಟಸ್ವಾಮಿ ಮಾತನಾಡಿ, ಪತ್ರಿಕೋದ್ಯಮ ಮೂರನೇ ಕಣ್ಣಿನಂತೆ ಕೆಲಸ ಮಾಡಬೇಕಿದೆ. ಆದರೆ, ಈಚೆಗೆ ಪತ್ರಿಕೋದ್ಯಮ ಹಾದಿ ತಪ್ಪಿದೆ ಎಂದರು.</p>.<p>ಕರ್ನಾಟಕ ಸಂಪಾದಕ ಮತ್ತು ವರದಿಗಾರರ ಸಂಘದ ನಿಕಟಪೂರ್ವ ರಾಜ್ಯ ಘಟಕದ ಅಧ್ಯಕ್ಷ ಕಲಾವಿದ ವಿಷ್ಣು ಮಾತನಾಡಿದರು.</p>.<p>ಕರ್ನಾಟಕ ಸಂಪಾದಕರ ಮತ್ತು ವರದಿಗಾರರ ಸಂಘದ ಜಿಲ್ಲಾಧ್ಯಕ್ಷ ನಂದಗುಡಿ ರಾಮೇಗೌಡ, ಜಿಲ್ಲಾ ಕಾರ್ಯದರ್ಶಿ ನಟರಾಜ್ ಎಂಎನ್ಆರ್, ರಾಜ್ಯ ನಿರ್ದೇಶಕ ಟಿ.ನಾಗರಾಜ್, ತಾಲ್ಲೂಕು ರೈತ ಸಂಘದ ಅಧ್ಯಕ್ಷ ಅಕ್ಕಲೇಗೌಡ ಸೇರಿದಂತೆ ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ</strong>: ಸಮಾಜದ ಓರೆಕೋರೆ ತಿದ್ದುವಲ್ಲಿ ಪತ್ರಿಕಾರಂಗ ಮತ್ತು ಪೊಲೀಸ್ ಇಲಾಖೆ ಪಾತ್ರ ಮಹತ್ವದ್ದು ಎಂದು ಹೊಸಕೋಟೆ ಠಾಣೆ ಆರಕ್ಷಕ ನೀರೀಕ್ಷಕ ಗೋವಿಂದ್ ತಿಳಿಸಿದರು.</p>.<p>ನಗರದಲ್ಲಿ ಕರ್ನಾಟಕ ಸಂಪಾದಕರ ಮತ್ತು ವರದಿಗಾರರ ಸಂಘದ ಹಮ್ಮಿಕೊಂಡಿದ್ದ ಸಂಘದ ತಾಲ್ಲೂಕು ಘಟಕದ ಪತ್ರಕರ್ತರಿಗೆ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಪೊಲೀಸರು, ಪತ್ರಕರ್ತರು ಸಾರ್ವಜನಿಕರೊಂದಿಗೆ ದರ್ಪ ತೋರದೆ ಪ್ರೀತಿ, ವಿಶ್ವಾಸದಿಂದ ಜವಾಬ್ದಾರಿ ಅರಿತು ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಪತ್ರಕರ್ತರು ನೈಜ ಪ್ರಾಮಾಣಿಕವಾಗಿ ವರದಿ ಮಾಡಬೇಕಿದೆ. ರಾಜಕಾರಣಗಳು ಅಧಿಕಾರಿಗಳ ಬಳಿ ನ್ಯಾಯ ಸಿಗದಿದ್ದಾಗ ಕೊನೆಯದಾಗಿ ಮಾಧ್ಯಮದ ಬಳಿ ಬರುತ್ತಾರೆ. ಆ ನಿಟ್ಟಿನಲ್ಲಿ ಎಚ್ಚರಿಕೆಯಿಂದ ಕೆಲಸ ಮಾಡಬೇಕಿದೆ ಎಂದರು.<br> <br>ವಕೀಲರ ಸಂಘದ ಮಾಜಿ ಅಧ್ಯಕ್ಷ ಎಂ.ವೆಂಕಟಸ್ವಾಮಿ ಮಾತನಾಡಿ, ಪತ್ರಿಕೋದ್ಯಮ ಮೂರನೇ ಕಣ್ಣಿನಂತೆ ಕೆಲಸ ಮಾಡಬೇಕಿದೆ. ಆದರೆ, ಈಚೆಗೆ ಪತ್ರಿಕೋದ್ಯಮ ಹಾದಿ ತಪ್ಪಿದೆ ಎಂದರು.</p>.<p>ಕರ್ನಾಟಕ ಸಂಪಾದಕ ಮತ್ತು ವರದಿಗಾರರ ಸಂಘದ ನಿಕಟಪೂರ್ವ ರಾಜ್ಯ ಘಟಕದ ಅಧ್ಯಕ್ಷ ಕಲಾವಿದ ವಿಷ್ಣು ಮಾತನಾಡಿದರು.</p>.<p>ಕರ್ನಾಟಕ ಸಂಪಾದಕರ ಮತ್ತು ವರದಿಗಾರರ ಸಂಘದ ಜಿಲ್ಲಾಧ್ಯಕ್ಷ ನಂದಗುಡಿ ರಾಮೇಗೌಡ, ಜಿಲ್ಲಾ ಕಾರ್ಯದರ್ಶಿ ನಟರಾಜ್ ಎಂಎನ್ಆರ್, ರಾಜ್ಯ ನಿರ್ದೇಶಕ ಟಿ.ನಾಗರಾಜ್, ತಾಲ್ಲೂಕು ರೈತ ಸಂಘದ ಅಧ್ಯಕ್ಷ ಅಕ್ಕಲೇಗೌಡ ಸೇರಿದಂತೆ ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>