ವಿವಿಧ ಧಾರ್ಮಿಕ ಕೇಂದ್ರ, ಕ್ಷೇತ್ರಗಳಿಗೆ ಪಾದಯಾತ್ರೆ ಮೂಲಕ ಪ್ರವಾಸ ಕೈಗೊಳ್ಳುವ ಹವ್ಯಾಸ ಹೊಂದಿದ್ದ ಮಹೇಶ್ ಐದು ಬಾರಿ ಕಾಶಿ ಯಾತ್ರೆ ಕೈಗೊಂಡಿದ್ದರು. ಧರ್ಮಸ್ಥಳ, ತಿರುಪತಿ ಸೇರಿದಂತೆ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಪಾದಯಾತ್ರೆಯಲ್ಲಿ ತೆರಳಿದ್ದರು. ಕೆಲವು ತಿಂಗಳ ಹಿಂದೆ ಪಾದಯಾತ್ರೆ ಸಂದರ್ಭದಲ್ಲಿ ಅಪಘಾತ ಸಂಭವಿಸಿ ಗಾಯಗೊಂಡಿದ್ದರು.