ಸಂವಿಧಾನದಲ್ಲಿ ನಂಬಿಕೆ ಇಟ್ಟು ಗೌರವ ನೀಡುವುದರೊಂದಿಗೆ ನಮ್ಮ ಕರ್ತವ್ಯ ನಿಭಾಯಿಸಬೇಕಿದೆ. ಏಕತೆ ಹಾಗೂ ಸಮಗ್ರತೆಯಿಂದ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕಿದೆ. ಭಾಷೆ, ನೆಲ, ಸಂಸ್ಕೃತಿ ವಿಷಯದಲ್ಲಿ ಭಾರತೀಯರಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವ ಶಕ್ತಿ ಇದೆ. ನಮ್ಮ ಕಲೆ, ಸಂಸ್ಕೃತಿ, ಪರಂಪರೆಗಳನ್ನು ವಿಶ್ವ ಮಟ್ಟದಲ್ಲಿ ಸಾರುವುದು ಹಾಗೂ ನಮ್ಮ ಪರಿಸರವನ್ನು ಸಂರಕ್ಷಣೆ ಮಾಡಿಕೊಳ್ಳುವುದು ಅಗತ್ಯವಾಗಿದೆ ಎಂದರು.