ಹಿರಿಯ ಕನ್ನಡಪರ ಹೋರಾಟಗಾರ ಟಿ.ಎನ್.ಪ್ರಭುದೇವ್ ಮಾತನಾಡಿ, ನಗರಕ್ಕೆ ವಿದ್ಯುತ್, ಕೊಳವೆಬಾವಿ, ಪ್ರೌಢಶಾಲೆ, ಆಸ್ಪತ್ರೆ, ಪಶು ವೈದ್ಯಶಾಲೆ, ಕೈಮಗ್ಗ ಮತ್ತು ಗೃಹ ಕೈಗಾರಿಕಾ ತರಬೇತಿ ಶಾಲೆ ಮಂಜೂರು ಮಾಡಿಸಿದ ಕೊಂಗಾಡಿಯಪ್ಪ ಊರಿನ ಯಾವ ಸಮಸ್ಯೆಯಾದರೂ ಬಗೆಹರಿಸಲು ದುಡಿಯುತ್ತಿದ್ದರು. ಸಾಮಾನ್ಯ ಶಿಕ್ಷಕರಾಗಿದ್ದುಕೊಂಡು ಊರಿಗೆ ಮೂಲ ಸೌಲಭ್ಯ ಕಲ್ಪಿಸಿದ ಆದರ್ಶಪ್ರಾಯರು ಎಂದು ತಿಳಿಸಿದರು.