<p><strong>ಮಾಲೂರು</strong>: ತ್ವರಿತವಾಗಿ ಗುರುಭವನ ನಿರ್ಮಾಣಕ್ಕೆ ಕ್ರಮವಹಿಸಲಾಗಿದ್ದು, ಮುಂದಿನ ವರ್ಷ ಗುರುಭವನದಲ್ಲಿ ಶಿಕ್ಷಕರ ದಿನ ಆಚರಿಸಲಾಗುವುದು ಎಂದು ಶಾಸಕ ಕೆ.ವೈ. ನಂಜೇಗೌಡ ತಿಳಿಸಿದರು.</p>.<p>ತಾಲ್ಲೂಕು ಆಡಳಿತ ಗುರುವಾರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಭಾಪುಲೆ ದಂಪತಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಮಾತನಾಡಿದರು.</p>.<p>ಸೆ.5ರಂದು ಸಂಕೇತವಾಗಿ ಶಿಕ್ಷಕರ ದಿನ ಆಚರಿಸಲಾಗುತ್ತಿದ್ದು, ಸೆ.9 ರಂದು ವಿಶೇಷವಾಗಿ ಆಚರಿಸಲಾಗುವುದು ಎಂದರು.</p>.<p>ಶಿಕ್ಷಕರು ಪಠ್ಯದ ಜೊತೆ ನೈತಿಕ ಮತ್ತು ಮಾನವೀಯ ಮೌಲ್ಯವನ್ನು ಬೋಧಿಸುತ್ತಾರೆ. ಇವು ವಿದ್ಯಾರ್ಥಿಗಳನ್ನು ಯಶಸ್ಸಿನತ್ತ ಕೊಂಡೊಯ್ಯುವ ದೀಪವಾಗಿದೆ ಎಂದು ತಿಳಿಸಿದರು.</p>.<p>ತಹಶೀಲ್ದಾರ್ ರಮೇಶ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಮುನೇಗೌಡ, ನೊಸಗೆರೆ ಗ್ರಾ.ಪಂ ಅಧ್ಯಕ್ಷ ವಿನಯ್, ಮುಖಂಡ ಹನುಮಂತರೆಡ್ಡಿ, ಪುರಸಭೆ ಸದಸ್ಯ ಇಮ್ತಿಯಾಜ್, ವಕೀಲ ಬಾಬು, ಶಿಕ್ಷಕರಾದ ವೆಂಕಟಸ್ವಾಮಿ, ಶಶಿಧರ್, ಕಾಕಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು</strong>: ತ್ವರಿತವಾಗಿ ಗುರುಭವನ ನಿರ್ಮಾಣಕ್ಕೆ ಕ್ರಮವಹಿಸಲಾಗಿದ್ದು, ಮುಂದಿನ ವರ್ಷ ಗುರುಭವನದಲ್ಲಿ ಶಿಕ್ಷಕರ ದಿನ ಆಚರಿಸಲಾಗುವುದು ಎಂದು ಶಾಸಕ ಕೆ.ವೈ. ನಂಜೇಗೌಡ ತಿಳಿಸಿದರು.</p>.<p>ತಾಲ್ಲೂಕು ಆಡಳಿತ ಗುರುವಾರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಭಾಪುಲೆ ದಂಪತಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಮಾತನಾಡಿದರು.</p>.<p>ಸೆ.5ರಂದು ಸಂಕೇತವಾಗಿ ಶಿಕ್ಷಕರ ದಿನ ಆಚರಿಸಲಾಗುತ್ತಿದ್ದು, ಸೆ.9 ರಂದು ವಿಶೇಷವಾಗಿ ಆಚರಿಸಲಾಗುವುದು ಎಂದರು.</p>.<p>ಶಿಕ್ಷಕರು ಪಠ್ಯದ ಜೊತೆ ನೈತಿಕ ಮತ್ತು ಮಾನವೀಯ ಮೌಲ್ಯವನ್ನು ಬೋಧಿಸುತ್ತಾರೆ. ಇವು ವಿದ್ಯಾರ್ಥಿಗಳನ್ನು ಯಶಸ್ಸಿನತ್ತ ಕೊಂಡೊಯ್ಯುವ ದೀಪವಾಗಿದೆ ಎಂದು ತಿಳಿಸಿದರು.</p>.<p>ತಹಶೀಲ್ದಾರ್ ರಮೇಶ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಮುನೇಗೌಡ, ನೊಸಗೆರೆ ಗ್ರಾ.ಪಂ ಅಧ್ಯಕ್ಷ ವಿನಯ್, ಮುಖಂಡ ಹನುಮಂತರೆಡ್ಡಿ, ಪುರಸಭೆ ಸದಸ್ಯ ಇಮ್ತಿಯಾಜ್, ವಕೀಲ ಬಾಬು, ಶಿಕ್ಷಕರಾದ ವೆಂಕಟಸ್ವಾಮಿ, ಶಶಿಧರ್, ಕಾಕಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>