<p><strong>ದೊಡ್ಡಬಳ್ಳಾಪುರ</strong>: ತಾಲ್ಲೂಕಿನ ಮಾದಗೊಂಡನಹಳ್ಳಿಯಲ್ಲಿ ಶನಿವಾರ ವ್ಯಕ್ತಿಯೊಬ್ಬ ತನ್ನನ್ನು ನೋಡಿ ಬೊಗಳಿದ ನಾಯಿಯನ್ನು ಏರ್ಗನ್ನಿಂದ ಶೂಟ್ ಮಾಡಿ ಸಾಯಿಸಿದ್ದಾನೆ.</p>.<p>ಮಾದಗೊಂಡನಹಳ್ಳಿಯ ಕೃಷ್ಣಪ್ಪ ಎಂಬ ವ್ಯಕ್ತಿ ಹರೀಶ್ ಎಂಬುವರ ಸಾಕುನಾಯಿ ‘ರಾಕಿ’ ತನ್ನನ್ನು ನೋಡಿ ಬೊಗಳಿತು ಎಂದು ಕೋಪಗೊಂಡು ಶೂಟ್ ಮಾಡಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಗುಂಡಿನ ಶಬ್ದದಿಂದ ತಪ್ಪಿಸಿಕೊಂಡು ಓಡಿಹೋದ ನಾಯಿಯನ್ನು ರಾಗಿಯ ಹೊಲದಲ್ಲಿ ಅಟ್ಟಾಡಿಸಿಕೊಂಡು ಕೃಷ್ಣಪ್ಪ ಶೂಟ್ ಮಾಡಿದ್ದಾರೆ. ಏಳೆಂಟು ಗುಂಡು ತಿಂದ ಐದು ವರ್ಷದ ರಾಕಿ ಸಾವನ್ನಪ್ಪಿದೆ’ ಎಂದು ನಾಯಿಯ ಮಾಲೀಕ ಹರೀಶ್ ದೂರಿನಲ್ಲಿ ತಿಳಿಸಿದ್ದಾರೆ.</p>.<p>‘ಈ ನಾಯಿ ನನ್ನ ಮಗನನ್ನು ಕಚ್ಚಿದೆ, ಅದಕ್ಕೆ ಕೊಂದಿದ್ದೇನೆ. ಬೇಕಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದು ಕೃಷ್ಣಪ್ಪ ಸವಾಲು ಹಾಕಿದ್ದಾರೆ’ ಎಂದು ಹರೀಶ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ</strong>: ತಾಲ್ಲೂಕಿನ ಮಾದಗೊಂಡನಹಳ್ಳಿಯಲ್ಲಿ ಶನಿವಾರ ವ್ಯಕ್ತಿಯೊಬ್ಬ ತನ್ನನ್ನು ನೋಡಿ ಬೊಗಳಿದ ನಾಯಿಯನ್ನು ಏರ್ಗನ್ನಿಂದ ಶೂಟ್ ಮಾಡಿ ಸಾಯಿಸಿದ್ದಾನೆ.</p>.<p>ಮಾದಗೊಂಡನಹಳ್ಳಿಯ ಕೃಷ್ಣಪ್ಪ ಎಂಬ ವ್ಯಕ್ತಿ ಹರೀಶ್ ಎಂಬುವರ ಸಾಕುನಾಯಿ ‘ರಾಕಿ’ ತನ್ನನ್ನು ನೋಡಿ ಬೊಗಳಿತು ಎಂದು ಕೋಪಗೊಂಡು ಶೂಟ್ ಮಾಡಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಗುಂಡಿನ ಶಬ್ದದಿಂದ ತಪ್ಪಿಸಿಕೊಂಡು ಓಡಿಹೋದ ನಾಯಿಯನ್ನು ರಾಗಿಯ ಹೊಲದಲ್ಲಿ ಅಟ್ಟಾಡಿಸಿಕೊಂಡು ಕೃಷ್ಣಪ್ಪ ಶೂಟ್ ಮಾಡಿದ್ದಾರೆ. ಏಳೆಂಟು ಗುಂಡು ತಿಂದ ಐದು ವರ್ಷದ ರಾಕಿ ಸಾವನ್ನಪ್ಪಿದೆ’ ಎಂದು ನಾಯಿಯ ಮಾಲೀಕ ಹರೀಶ್ ದೂರಿನಲ್ಲಿ ತಿಳಿಸಿದ್ದಾರೆ.</p>.<p>‘ಈ ನಾಯಿ ನನ್ನ ಮಗನನ್ನು ಕಚ್ಚಿದೆ, ಅದಕ್ಕೆ ಕೊಂದಿದ್ದೇನೆ. ಬೇಕಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದು ಕೃಷ್ಣಪ್ಪ ಸವಾಲು ಹಾಕಿದ್ದಾರೆ’ ಎಂದು ಹರೀಶ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>