<p><strong>ಹೊಸಕೋಟೆ:</strong> ಮೈಲಾಪುರದ ಮಂಜುನಾಥ್ ಆತ್ಮಹತ್ಯೆ ಪ್ರಕರಣವನ್ನು ನಿಷ್ಪಕ್ಷಪಾತದಿಂದ ತನಿಖೆ ನಡೆಸಲಾಗುವುದು ಎಂದು ಡಿವೈಎಸ್ಪಿ ಮಲ್ಲೇಶ್ ತಿಳಿಸಿದರು.</p>.<p>ಪ್ರಕರಣಕ್ಕೆ ಸಂಬಂದಿಸಿದಂತೆ ನಾಪತ್ತೆಯಾದ ಮಹಿಳೆಯ ದೂರವಾಣಿ ಕರೆ ಮತ್ತು ಸಿಸಿಟಿವಿ ಧೃಶ್ಯಾವಳಿ ಪರಿಶೀಲಿಸಿದಾಗ ಮೈಲಾಪುರದ ಮೃತ ಮಂಜುನಾಥ್ ಅವರೊಟ್ಟಿಗೆ ಹೆಚ್ಚಿನ ಸಂದರ್ಭದಲ್ಲಿ ಮಾತನಾಡಿರುವುದು ದೃಢಪಟ್ಟಿದೆ. ಹೀಗಾಗಿ ಅವರನ್ನು ವಿಚಾರಣೆಗೆ ಠಾಣೆಗೆ ಕರೆಸಿಕೊಳ್ಳಲಾಗಿತ್ತು. ವಿಚಾರಣೆ ಬಳಿಕ ವಾಪಸ್ ಕಳುಹಿಸಲಾಗಿತ್ತು ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಆದರೆ ಕುಟುಂಬಸ್ಥರು ಆತ್ಮಹತ್ಯೆಗೆ ಪೊಲೀಸರೇ ನೇರ ಕಾರಣ ಎಂದು ಆರೋಪಿಸಿದ್ದರು. ಕುಟುಂಬಸ್ಥರನ್ನು ಕರೆಸಿ ಪೊಲೀಸರಿಗೂ ಈ ಪ್ರಕರಣಕ್ಕೂ ಯಾವ ಸಂಬಂದವೂ ಇಲ್ಲ. ಯಾರ ಮೇಲೆ ಬೇಕಾದರೂ ದೂರು ಕೊಡಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಾಗುವುದು ಎಂದು ಧೈರ್ಯ ತುಂಬಲಾಗಿದೆ ಎಂದು ತಿಳಿಸಿದರು.</p>.<p>ನಾಪತ್ತೆಯಾದ ಮಹಿಳೆಯ ದೂರವಾಣಿ ಕರೆ ಮತ್ತು ಸಂಬಂಧಿಕರ ಮನೆಗಳಲ್ಲಿ ವಿಚಾರಿಸಲಾಗುತ್ತಿದೆ. ಆದರೂ ಆಕೆಯ ಸುಳಿವು ಇದುವರೆಗೂ ಪತ್ತೆಯಾಗಿಲ್ಲ. ಪತ್ತೆಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ ಶೀಘ್ರವೇ ಪತ್ತೆಹಚ್ಚುವುದಾಗಿ ತಿಳಿಸಿದರು.</p>.<div><blockquote>ಯಾವುದೇ ಪ್ರಕರಣ ಇರಲಿ ಅದಕ್ಕೆ ಪೂರಕ ದಾಖಲೆ ಸಿಕ್ಕಾಗ ಸಹಜವಾಗಿ ಅಂತಹ ವ್ಯಕ್ತಿಯನ್ನು ವಿಚಾರಣೆಗೆ ಕರೆಯುತ್ತೇವೆ. ಹಾಗಂತ ವಿಚಾರಣೆ ಮಾಡಿದ್ದರಿಂದಲೇ ಆತ್ಯಹತ್ಯೆ ಮಾಡಿಕೊಂಡರು ಎಂದರೆ ಹೇಗೆ? ಹಾಗಾದರೆ ವಿಚಾರಣೆ ಮಾಡುವುದೇ ತಪ್ಪೆ? ಮತ್ತೆ ತನಿಖೆ ಹೇಗೆ ಮಾಡಬೇಕು </blockquote><span class="attribution">ಮಲ್ಲೇಶ್ ಡಿವೈಎಸ್ಪಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ:</strong> ಮೈಲಾಪುರದ ಮಂಜುನಾಥ್ ಆತ್ಮಹತ್ಯೆ ಪ್ರಕರಣವನ್ನು ನಿಷ್ಪಕ್ಷಪಾತದಿಂದ ತನಿಖೆ ನಡೆಸಲಾಗುವುದು ಎಂದು ಡಿವೈಎಸ್ಪಿ ಮಲ್ಲೇಶ್ ತಿಳಿಸಿದರು.</p>.<p>ಪ್ರಕರಣಕ್ಕೆ ಸಂಬಂದಿಸಿದಂತೆ ನಾಪತ್ತೆಯಾದ ಮಹಿಳೆಯ ದೂರವಾಣಿ ಕರೆ ಮತ್ತು ಸಿಸಿಟಿವಿ ಧೃಶ್ಯಾವಳಿ ಪರಿಶೀಲಿಸಿದಾಗ ಮೈಲಾಪುರದ ಮೃತ ಮಂಜುನಾಥ್ ಅವರೊಟ್ಟಿಗೆ ಹೆಚ್ಚಿನ ಸಂದರ್ಭದಲ್ಲಿ ಮಾತನಾಡಿರುವುದು ದೃಢಪಟ್ಟಿದೆ. ಹೀಗಾಗಿ ಅವರನ್ನು ವಿಚಾರಣೆಗೆ ಠಾಣೆಗೆ ಕರೆಸಿಕೊಳ್ಳಲಾಗಿತ್ತು. ವಿಚಾರಣೆ ಬಳಿಕ ವಾಪಸ್ ಕಳುಹಿಸಲಾಗಿತ್ತು ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಆದರೆ ಕುಟುಂಬಸ್ಥರು ಆತ್ಮಹತ್ಯೆಗೆ ಪೊಲೀಸರೇ ನೇರ ಕಾರಣ ಎಂದು ಆರೋಪಿಸಿದ್ದರು. ಕುಟುಂಬಸ್ಥರನ್ನು ಕರೆಸಿ ಪೊಲೀಸರಿಗೂ ಈ ಪ್ರಕರಣಕ್ಕೂ ಯಾವ ಸಂಬಂದವೂ ಇಲ್ಲ. ಯಾರ ಮೇಲೆ ಬೇಕಾದರೂ ದೂರು ಕೊಡಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಾಗುವುದು ಎಂದು ಧೈರ್ಯ ತುಂಬಲಾಗಿದೆ ಎಂದು ತಿಳಿಸಿದರು.</p>.<p>ನಾಪತ್ತೆಯಾದ ಮಹಿಳೆಯ ದೂರವಾಣಿ ಕರೆ ಮತ್ತು ಸಂಬಂಧಿಕರ ಮನೆಗಳಲ್ಲಿ ವಿಚಾರಿಸಲಾಗುತ್ತಿದೆ. ಆದರೂ ಆಕೆಯ ಸುಳಿವು ಇದುವರೆಗೂ ಪತ್ತೆಯಾಗಿಲ್ಲ. ಪತ್ತೆಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ ಶೀಘ್ರವೇ ಪತ್ತೆಹಚ್ಚುವುದಾಗಿ ತಿಳಿಸಿದರು.</p>.<div><blockquote>ಯಾವುದೇ ಪ್ರಕರಣ ಇರಲಿ ಅದಕ್ಕೆ ಪೂರಕ ದಾಖಲೆ ಸಿಕ್ಕಾಗ ಸಹಜವಾಗಿ ಅಂತಹ ವ್ಯಕ್ತಿಯನ್ನು ವಿಚಾರಣೆಗೆ ಕರೆಯುತ್ತೇವೆ. ಹಾಗಂತ ವಿಚಾರಣೆ ಮಾಡಿದ್ದರಿಂದಲೇ ಆತ್ಯಹತ್ಯೆ ಮಾಡಿಕೊಂಡರು ಎಂದರೆ ಹೇಗೆ? ಹಾಗಾದರೆ ವಿಚಾರಣೆ ಮಾಡುವುದೇ ತಪ್ಪೆ? ಮತ್ತೆ ತನಿಖೆ ಹೇಗೆ ಮಾಡಬೇಕು </blockquote><span class="attribution">ಮಲ್ಲೇಶ್ ಡಿವೈಎಸ್ಪಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>