ಚನ್ನರಾಯಪಟ್ಟಣ ಹೋಬಳಿ ನಲ್ಲೂರು ಗ್ರಾಮದಲ್ಲಿ ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆ ಮಾಡಿದ ಮುಖ್ಯಶಿಕ್ಷಕ ರಮೇಶ್ ಮಾತನಾಡಿ, ಪ್ರತಿಯೊಂದು ಮಗುವಿಗೂ ಉಚಿತ ಗುಣಮಟ್ಟದ ಶಿಕ್ಷಣ ಸಿಗಬೇಕು ಎನ್ನುವ ಕಾರಣಕ್ಕಾಗಿ ಸರ್ಕಾರ ಅನೇಕ ಸೌಲಭ್ಯಗಳನ್ನು ಕೊಡುತ್ತಿದೆ. ವಿದ್ಯಾರ್ಥಿ ವೇತನ, ಪಠ್ಯಪುಸ್ತಕ, ಸಮವಸ್ತ್ರ, ಪೌಷ್ಟಿಕವಾದ ಬಿಸಿಯೂಟ, ಸೈಕಲ್, ಸೇರಿದಂತೆ ಅನೇಕ ಸೌಲಭ್ಯಗಳನ್ನು ಕೊಡುತ್ತಿದೆ ಎಂದರು.