‘ಧರ್ಮಗಳ ನಡುವೆ ಶಾಂತಿ, ಸೌಹಾರ್ದತೆ ಮೂಡಲಿ ಎಂಬ ಉದ್ದೇಶದಿಂದ ಯುವಕರಿಗೆ ಮ್ಯಾರಥಾನ್ ಏರ್ಪಡಿಸಲಾಗಿದೆ. ಈ ಮೂಲಕ ಜಾತಿ ವ್ಯವಸ್ಥೆಯ ನಿರ್ಮೂಲನೆ ಮಾಡಲು ಜಾಗೃತಿ ಮೂಡಿಸಲಾಗುವುದು. ಪ್ರತಿಯೊಬ್ಬರು ಸೌಹಾರ್ದದಿಂದ ಜೀವನ ನಡೆಸುವಂತಾಗಬೇಕು. ಧರ್ಮಗಳ ನಡುವೆ ಕಂದಕ ಉಂಟಾಗಿ ಸ್ನೇಹ, ಸೌಹಾರ್ದ ಕಣ್ಮರೆಯಾಗಿದೆ. ನಾವೆಲ್ಲರೂ ಒಂದೇ ಎಂಬ ಭಾವನೆಯನ್ನು ಯುವಕರಲ್ಲಿ ತುಂಬಲು ಈ ಮ್ಯಾರಥಾನ್ ಸಹಕಾರಿಯಾಗಲಿದೆ’ ಎಂದರು.