ಜ.26 ರಂದು ತಾಲ್ಲೂಕಿನ ಹಾಡೋನಹಳ್ಳಿಯಲ್ಲಿನ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಸಿರಿಧಾನ್ಯ ಹಬ್ಬ ಮತ್ತು ಕಿಸಾನ್ ಮೇಳ -2021 ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಜನ ಪ್ರತಿನಿಧಿಗಳು, ರೈತರು, ರೈತ ಮಹಿಳೆಯರು, ಸಾವಯವ, ಸಿರಿಧಾನ್ಯ ಬೆಳೆಗಾರರು ಭಾಗವಹಿಸಲಿದ್ದಾರೆ.