ಪುರಸಭಾ ಮುಖ್ಯಾಧಿಕಾರಿ ಎ.ಎಚ್.ನಾಗರಾಜ್ ಮಾತನಾಡಿ, ‘ನಗರದಲ್ಲಿನ ಎಲ್ಲಾ ಮಾಂಸ ಮಾರಾಟದ ಅಂಗಡಿಗಳಿಗೆ ನೋಟಿಸ್ ಜಾರಿ ಮಾಡಿ, ಅಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಜನರಿಗೆ ತೊಂದರೆಯಾಗದ ರೀತಿಯಲ್ಲಿ ವಿಲೇವಾರಿ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದೇವೆ. ಒಂದು ವೇಳೆ ಪುನಃ ತ್ಯಾಜ್ಯವನ್ನು ರಸ್ತೆಯ ಬದಿಗಳಲ್ಲಿ ಸುರಿಯುತ್ತಿದ್ದರೆ, ಅಂತಹ ಅಂಗಡಿಗಳ ಮೇಲೆ ಕ್ರಮ ಕೈಗೊಳ್ಳಲು ಹಿಂದೆ ಸರಿಯುವುದಿಲ್ಲ’ ಎಂದರು.