ಮುಖಂಡ ಎಂ.ಡಿ. ರಾಮಚಂದ್ರಪ್ಪ ಮಾತನಾಡಿ, ರಾಷ್ಟ್ರ, ಅಂತರರಾಷ್ಟ್ರೀಯ ಸೇರಿದಂತೆ ಸ್ಥಳೀಯವಾಗಿ ನಡೆಯುವಂತಹ ವಿದ್ಯಮಾನಗಳನ್ನು ಪ್ರಸಾರ ಮಾಡಿ, ಜನರ ಧ್ವನಿಯಾಗಿ ಕೆಲಸ ಮಾಡುವುದರ ಜೊತೆಗೆ, ಸರ್ಕಾರದ ಲೋಪದೋಷಗಳನ್ನು ತೋರಿಸುವ ಮಾಧ್ಯಮಗಳಿಗೆ ಇರುವ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವಂತಹ ನಿರ್ಧಾರ ಮಾಡಿರುವ ಬಿಜೆಪಿ ಸರ್ಕಾರ ಹಿಟ್ಲರ್ ಸಂಸ್ಕೃತಿಯನ್ನು ಮರೆಯುತ್ತಿದೆ ಎಂದರು.