ಜಾಂಬವ ಯುವಸೇನಾ ತಾಲ್ಲೂಕು ಘಟಕ ಉಪಾಧ್ಯಕ್ಷ ಎಚ್. ಮುನಿಕೃಷ್ಣ ಮಾತನಾಡಿ, ಕೊಯಿರಾ ಪರಿಶಿಷ್ಟರ ಕಾಲೊನಿಯಲ್ಲಿ ಒಂದೂವರೆ ಸಾವಿರಕ್ಕಿಂತ ಹೆಚ್ಚು ದಲಿತರು, ಕೂಲಿ ಕಾರ್ಮಿಕರು ಇದ್ದಾರೆ. ಬಹುತೇಕ ದಲಿತರು ಕಾಲೊನಿ ಪಕ್ಕದಲ್ಲಿರುವ ಮದ್ಯದಂಗಡಿಗೆ ನಿತ್ಯದ ದುಡಿಮೆಯ ಹಣ ಹಾಕುತ್ತಿದ್ದಾರೆ. ವಿವಿಧ ಗ್ರಾಮಗಳಲ್ಲಿರುವ ಚಿಲ್ಲರೆ ಅಂಗಡಿಗಳಲ್ಲಿ ಬೆಳಗಿನ ಜಾವದಿಂದ ತಡರಾತ್ರಿಯವರೆಗೆ ಮದ್ಯಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ ಅದರ ಪರವಾನಗಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.