<p><strong>ದೊಡ್ಡಬಳ್ಳಾಪುರ: </strong>ಮಾನಸಿಕ ಸಮಸ್ಯೆಗಳಿಂದ ಮುಕ್ತವಾಗಬೇಕಿದ್ದರೆ ಮಕ್ಕಳಿಗೆ ಪಠ್ಯದೊಂದಿಗೆ ಸಾಹಿತ್ಯ ಸಂಗೀತದ ಅಭಿರುಚಿ ಬೆಳೆಸಬೇಕಿದೆ ಎಂದು ಖ್ಯಾತ ಗಾಯಕಿ ಡಾ.ಬಿ.ಕೆ.ಸುಮಿತ್ರ ಹೇಳಿದರು.</p>.<p>ನಗರದ ಸ್ವಾಮಿ ವಿವೇಕಾನಂದ ಕನ್ನಡ ಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗಾಗಿ ನಡೆದ ಎರಡು ದಿನಗಳ ಉಚಿತ ಸಮೂಹ ಗೀತ ಗಾಯನ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.</p>.<p>ಮಕ್ಕಳಿಗೆ ಪಠ್ಯ ಚಟುವಟಿಕೆಗಳು ಎಷ್ಟು ಪೂರಕವೋ ಅಷ್ಟೇ ಮುಖ್ಯ ಸಹಪಠ್ಯ ಚಟುವಟಿಕೆ. ಅದರಲ್ಲೂ ಸಂಗೀತ ಮತ್ತು ಸಾಹಿತ್ಯ ನಮ್ಮ ಬದುಕಿನ ಸಂವೇದನೆಗಳನ್ನು ಹೆಚ್ಚಿಸುತ್ತದೆ. ಸಂಗೀತದಿಂದ ಮನಸ್ಸಿನ ಏಕಾಗ್ರತೆ ವೃದ್ಧಿಸುವುದಲ್ಲದೆ ಶಿಕ್ಷಣದಲ್ಲಿ ಆಸಕ್ತಿ ಹೆಚ್ಚಿಸುತ್ತದೆ ಎಂದು ತಿಳಿಸಿದರು.</p>.<p>ಮಕ್ಕಳು ಇಂದು ಸಾಮಾಜಿಕ ಜಾಲತಾಣಗಳಿಗೆ ಮಾರುಹೋಗಿ ಮಾನಸಿಕ ರೋಗಗಳಿಗೆ ಬಲಿಯಾಗುತ್ತಿದ್ದಾರೆ. ಇದರಿಂದ ಮುಕ್ತರಾಗಬೇಕಾದರೆ ಶಾಲೆಗಳಲ್ಲಿ ಸಂಗೀತ ತರಗತಿಗಳನ್ನು ನಡೆಸುವ ಮೂಲಕ ಮಕ್ಕಳಿಗೆ ಮಾನಸಿಕ ಚೈತನ್ಯ ನೀಡಬೇಕು ಎಂದರು.</p>.<p>ಕಾರ್ಯಾಗಾರದಲ್ಲಿ 5 ಗೀತೆಗಳಿಗೆ ‘ಎದೆ ತುಂಬಿ ಹಾಡಿದನು’ ಖ್ಯಾತಿಯ ಸಂಗೀತ ನಿರ್ದೇಶಕ ಬಿ.ವಿ.ಶ್ರೀನಿವಾಸ ರಾಗ ಸಂಯೋಜನೆ ಮಾಡಿದರು. ಸ್ವಾಮಿ ವಿವೇಕಾನಂದ ಕನ್ನಡ ಶಾಲೆಯ 647 ಮಕ್ಕಳಿಗೆ ಏಕ ಕಾಲದಲ್ಲಿ 5 ಕವನಗಳಿಗೆ ಸಂಗೀತ ರಚನೆ ಮಾಡುವ ಮೂಲಕ ಮಕ್ಕಳಿಗೆ ಗಾಯನ ಹೇಳಿಕೊಟ್ಟರು. ಶಾಲೆಯ ಮುಖ್ಯ ಶಿಕ್ಷಕ ಡಾ.ಹುಲಿಕಲ್ ನಟರಾಜ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೋಡಿಮಂಚೇನಹಳ್ಳಿ ಕಾಂತಪ್ಪ ಮತ್ತು ಶಶಿಕಲಾ ಕಾಂತಪ್ಪ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ಮಾನಸಿಕ ಸಮಸ್ಯೆಗಳಿಂದ ಮುಕ್ತವಾಗಬೇಕಿದ್ದರೆ ಮಕ್ಕಳಿಗೆ ಪಠ್ಯದೊಂದಿಗೆ ಸಾಹಿತ್ಯ ಸಂಗೀತದ ಅಭಿರುಚಿ ಬೆಳೆಸಬೇಕಿದೆ ಎಂದು ಖ್ಯಾತ ಗಾಯಕಿ ಡಾ.ಬಿ.ಕೆ.ಸುಮಿತ್ರ ಹೇಳಿದರು.</p>.<p>ನಗರದ ಸ್ವಾಮಿ ವಿವೇಕಾನಂದ ಕನ್ನಡ ಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗಾಗಿ ನಡೆದ ಎರಡು ದಿನಗಳ ಉಚಿತ ಸಮೂಹ ಗೀತ ಗಾಯನ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.</p>.<p>ಮಕ್ಕಳಿಗೆ ಪಠ್ಯ ಚಟುವಟಿಕೆಗಳು ಎಷ್ಟು ಪೂರಕವೋ ಅಷ್ಟೇ ಮುಖ್ಯ ಸಹಪಠ್ಯ ಚಟುವಟಿಕೆ. ಅದರಲ್ಲೂ ಸಂಗೀತ ಮತ್ತು ಸಾಹಿತ್ಯ ನಮ್ಮ ಬದುಕಿನ ಸಂವೇದನೆಗಳನ್ನು ಹೆಚ್ಚಿಸುತ್ತದೆ. ಸಂಗೀತದಿಂದ ಮನಸ್ಸಿನ ಏಕಾಗ್ರತೆ ವೃದ್ಧಿಸುವುದಲ್ಲದೆ ಶಿಕ್ಷಣದಲ್ಲಿ ಆಸಕ್ತಿ ಹೆಚ್ಚಿಸುತ್ತದೆ ಎಂದು ತಿಳಿಸಿದರು.</p>.<p>ಮಕ್ಕಳು ಇಂದು ಸಾಮಾಜಿಕ ಜಾಲತಾಣಗಳಿಗೆ ಮಾರುಹೋಗಿ ಮಾನಸಿಕ ರೋಗಗಳಿಗೆ ಬಲಿಯಾಗುತ್ತಿದ್ದಾರೆ. ಇದರಿಂದ ಮುಕ್ತರಾಗಬೇಕಾದರೆ ಶಾಲೆಗಳಲ್ಲಿ ಸಂಗೀತ ತರಗತಿಗಳನ್ನು ನಡೆಸುವ ಮೂಲಕ ಮಕ್ಕಳಿಗೆ ಮಾನಸಿಕ ಚೈತನ್ಯ ನೀಡಬೇಕು ಎಂದರು.</p>.<p>ಕಾರ್ಯಾಗಾರದಲ್ಲಿ 5 ಗೀತೆಗಳಿಗೆ ‘ಎದೆ ತುಂಬಿ ಹಾಡಿದನು’ ಖ್ಯಾತಿಯ ಸಂಗೀತ ನಿರ್ದೇಶಕ ಬಿ.ವಿ.ಶ್ರೀನಿವಾಸ ರಾಗ ಸಂಯೋಜನೆ ಮಾಡಿದರು. ಸ್ವಾಮಿ ವಿವೇಕಾನಂದ ಕನ್ನಡ ಶಾಲೆಯ 647 ಮಕ್ಕಳಿಗೆ ಏಕ ಕಾಲದಲ್ಲಿ 5 ಕವನಗಳಿಗೆ ಸಂಗೀತ ರಚನೆ ಮಾಡುವ ಮೂಲಕ ಮಕ್ಕಳಿಗೆ ಗಾಯನ ಹೇಳಿಕೊಟ್ಟರು. ಶಾಲೆಯ ಮುಖ್ಯ ಶಿಕ್ಷಕ ಡಾ.ಹುಲಿಕಲ್ ನಟರಾಜ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೋಡಿಮಂಚೇನಹಳ್ಳಿ ಕಾಂತಪ್ಪ ಮತ್ತು ಶಶಿಕಲಾ ಕಾಂತಪ್ಪ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>