‘ಸಂತೆ ಮೈದಾನದಲ್ಲಿ ಎರಡು ಕಲ್ಲಿನ ಶೆಡ್ಗಳಿವೆ. ಇವುಗಳನ್ನು ನಿರ್ಮಾಣ ಮಾಡಿ ಹಲವು ವರ್ಷಗಳೇ ಕಳೆದಿವೆ. ಕಲ್ಲಿನ ಚಾವಣಿ ಸೋರುತ್ತಿದೆ. ಇದರ ಕೆಳಗೆ ವ್ಯಾಪಾರಸ್ಥರು ವಹಿವಾಟು ನಡೆಸಲು ಸಾಧ್ಯವಾಗುತ್ತಿಲ್ಲ. ಜಾಗವೂ ವ್ಯರ್ಥವಾಗುತ್ತಿದೆ. ಇಲ್ಲಿ ಜಾಗದ ಕೊರತೆಯಿಂದಾಗಿ ಬಹಳಷ್ಟು ಮಂದಿ ನಾಡಕಚೇರಿ ಮುಂಭಾಗದ ರಸ್ತೆಯ ಇಕ್ಕೆಲಗಳಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕು’ ಎಂದುವ್ಯಾಪಾರಿ ರಾಜೇಶ್ ಕೋರಿದ್ದಾರೆ.