ಮೇಕೆದಾಟು ಯೋಜನೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಈ ವಿಚಾರವಾಗಿ ಚರ್ಚಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಫೆ.1ಕ್ಕೆ ಪೂರ್ವಭಾವಿ ಸಭೆ ನಡೆಸುತ್ತಿದೆ. ಈ ಯೋಜನೆಯಲ್ಲಿ ಮುಳುಗಡೆಯಾಗಲಿರುವ ಅರಣ್ಯ ಪ್ರದೇಶಕ್ಕೆ ಬದಲಿಯಾಗಿ ಕಂದಾಯ ಭೂಮಿಯನ್ನೇ ನೀಡಲಾಗುವುದು. ಇದಕ್ಕಾಗಿ ಭೂಮಿ ಗುರುತಿಸಲಾಗುತ್ತಿದೆ’ ಎಂದರು.