‘ಮನೆಯಲ್ಲಿನ ಬಡತನ, ಶಾಲೆ ಆರಂಭವಾಗದಿರುವುದು ಸೇರಿದಂತೆ ಕೆಲವೊಂದು ಅನಿವಾರ್ಯ ಕಾರಣಗಳಿಂದ ಮಕ್ಕಳು ದುಡಿಮೆಯಲ್ಲಿ ತೊಡಗಿದ್ದಾರೆ. ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಹಾಗೂ ಮಕ್ಕಳ ಸಹಾಯವಾಣಿಯ ಸಿಬ್ಬಂದಿ ಗ್ಯಾರೇಜ್ ಗಳಿಗೆ ದಾಳಿ ನಡೆಸಿ, ದುಡಿಮೆಯಲ್ಲಿ ತೊಡಗಿಸಿಕೊಂಡಿದ್ದ ಮಕ್ಕಳ ಪೋಷಕರಿಗೆ ಹಾಗೂ ಗ್ಯಾರೇಜುಗಳ ಮಾಲೀಕರಿಗೆ ಎಚ್ಚರಿಕೆ ನೀಡಿರುವುದು ಸ್ವಾಗತಾರ್ಹ. ಗ್ರಾಮೀಣ ಭಾಗದಲ್ಲಿ ಕೆಲಸ ಕಲಿಯಲಿ ಎನ್ನುವ ಉದ್ದೇಶದಿಂದ ರೈತರು, ಮಕ್ಕಳನ್ನು ಕೃಷಿ ಚಟುವಟಿಕೆಗಳಿಗೆ ದುಡಿಸಿಕೊಳ್ಳುತ್ತಿರುವುದನ್ನು ಗಮನಿಸಿ ಇಲಾಖೆಯವರು ಪೋಷಕರಿಗೆ ಎಚ್ಚರಿಕೆ ನೀಡಬೇಕು’ ಎಂದರು.