‘ದೇವೇಗೌಡರು 46 ನಿವೇಶನಗಳನ್ನು ಮಂಜೂರು ಮಾಡಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಅಪ್ಪ ಮಕ್ಕಳನ್ನು ದಗಲ್ಬಾಜಿ ಎಂದು ಕರೆದಿದ್ದಾರೆ. ನಮ್ಮನ್ನು ನಾಶ ಮಾಡುವುದೇ ಅವರ ಗುರಿ. ಅವರಿಗೆ ರಾಜರಾಜೇಶ್ವರಿ ನಗರ ಕ್ಷೇತ್ರದ ಜನರು ಉತ್ತರ ನೀಡಲಿದ್ದಾರೆ’ ಎಂದು ಹೇಳಿದರು.