ಕಳೆದ ನಾಲ್ಕು ವರ್ಷದಿಂದ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಬರಗಾಲಕ್ಕೆ ತುತ್ತಾಗಿದ್ದ ರೈತರಿಗೆ ಈ ವರ್ಷದ ಮುಂಗಾರು ಕೃಷಿ ಚಟುವಟಿಕೆ ಮಂದಗತಿಯಲ್ಲಿ ಸಾಗಿದರೂ ನಂತರ ಸಕಾಲದಲ್ಲಿ ಸುರಿದ ಮಳೆ ರೈತರ ಫಸಲಿಗೆ ವರದಾನವಾಗಿ ಪರಿಣಮಿಸಿತ್ತು. ಮತ್ತೆ ಹಿಂಗಾರು ಮಳೆಯ ಅತಂಕದಲ್ಲಿದ್ದ ರೈತರಿಗೆ ಪ್ರಸ್ತುತ ಒಣಹವೆಯಿಂದಾಗಿ ಅಶಾದಾಯಕ ವಾತಾವರಣ ನಿರ್ಮಾಣವಾಗಿದೆ. ಇತ್ತೀಚೆಗೆ ಸುರಿದ ಜಡಿಮಳೆಯಿಂದಾಗಿ ಗಟ್ಟಿ ಕಾಳು ಹೊತ್ತ ರಾಗಿ ತೆನೆ ಸಾಲುಗಟ್ಟಿ ನೆಲಕಚ್ಚಿತ್ತು.