ಚನ್ನರಾಯಸ್ವಾಮಿ ಬೆಟ್ಟದಲ್ಲಿ ಬೃಹತ್ ಪ್ರಮಾಣದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕಲ್ಲುಗಣಿಗಾರಿಕೆ ಕುರಿತಂತೆ 2007ರಲ್ಲಿ ಪ್ರಥಮ ಬಾರಿಗೆ ‘ಪ್ರಜಾವಾಣಿ’ ಪತ್ರಿಕೆಯಲ್ಲಿ ವರದಿ ಪ್ರಕಟವಾಗುವ ಮೂಲಕ ಸಾರ್ವಜನಿಕರ ಗಮನಕ್ಕೆ ಬಂದಿತ್ತು. ವರದಿ ಪ್ರಕಟವಾದ ನಂತರ ರಾಜ್ಯ ರೈತ ಸಂಘದ ಮುಖಂಡರಾಗಿದ್ದ ದಿವಂಗತ ಡಾ.ವೆಂಕಟರೆಡ್ಡಿ ಅವರ ನೇತೃತ್ವದಲ್ಲಿ ಸ್ಥಳೀಯ ರೈತರು ಗಣಿಗಾರಿಕೆ ನಿಲ್ಲಿಸುವಂತೆ ಹೋರಾಟ ತೀವ್ರಗೊಳಿಸಿದ್ದರು.