ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ತಾಲ್ಲೂಕುಗಳಲ್ಲಿ ಭೂಮಿ ಬೆಲೆ ಗಗನಕ್ಕೇರಿದೆ. 25 ವರ್ಷಗಳಿಂದ ತಾಲ್ಲೂಕಿನಲ್ಲಿ ನಿವೇಶನ ವಿತರಣೆಯಾಗಿಲ್ಲ, ಅರ್ಹರಿಗೆ ವಿವೇಶನ ನೀಡಲು ಕನಿಷ್ಠ 15 ರಿಂದ 20 ಎಕರೆ ಜಾಗ ಗುರುತಿಸಿ ನಿವೇಶನ ನೀಡಿ ವಸತಿ ಸೌಲಭ್ಯ ಕಲ್ಪಸುವಂತೆ ಸಚಿವರಿಗೆ ಮನವರಿಕೆ ಮಾಡಲಾಗಿದ್ದು ಭರವಸೆಯೂ ಸಿಕ್ಕಿದೆ ಎಂದರು.