ನಗರಸಭೆ ಅಧ್ಯಕ್ಷ ಅರುಣ್ ಕುಮಾರ್ ಮಾತನಾಡಿ, ಕಳೆದ ಒಂದೂವರೆ ವರ್ಷದಿಂದ ನಗರದಲ್ಲಿ ಯಾವುದೇ ಕಾಮಗಾರಿ ನಡೆದಿರಲಿಲ್ಲ. ಶಾಸಕರ ಅನುದಾನದಲ್ಲಿ ಯಾವುದೇ ಕೆಲಸ ನಡೆಯಲಿಲ್ಲ. ಈಗ ಮತ್ತೆ ಎಂ.ಟಿ.ಬಿ. ನಾಗರಾಜ್ ಸಚಿವರಾದ ಮೇಲೆ ಮತ್ತೆ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ. ಅಭಿವೃದ್ಧಿ ಕಾರ್ಯಕ್ಕೆ ಶಾಸಕರು ಬೆಂಬಲಿಸದೆ ಅಡ್ಡಿ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.