<p><strong>ಬನ್ನೇರುಘಟ್ಟ(ಆನೇಕಲ್): </strong><strong>ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಸಕಲವಾರದ ಬಳಿ ಭಾನುವಾರ </strong><strong>ಹಣ </strong>ಸಾಗಿಸುವ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಾಕಸ್ತ್ರ ತೋರಿಸಿ ₹31.30 ಲಕ್ಷ ದೋಚಿದ್ದಾರೆ.</p>.<p>ಉಡಾನ್ ಕ್ಯಾಶ್ ಕಲೆಕ್ಟಿಂಗ್ ಖಾಸಗಿ ಕಂಪನಿಯ ಹಣ ಸಂಗ್ರಹ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ ಕೈಲಾಶ್ ಭಾನುವಾರ ವಿವಿಧ ಶಾಖೆಗಳಿಗೆ ತೆರಳಿ ₹31,38,625 ಹಣ ಸಂಗ್ರಹಿಸಿ ಸ್ಕೂಟರ್ ಡಿಕ್ಕಿಯಲ್ಲಿ ಇಟ್ಟುಕೊಂಡು ಹೊರಟಿದ್ದ. ಎರಡು ಬೈಕ್ನಲ್ಲಿ ಆತನನ್ನು ಹಿಂಬಾಲಿಸಿಕೊಂಡು ಬಂದ ನಾಲ್ವರು ದುಷ್ಕರ್ಮಿಗಳು ಬನ್ನೇರುಘಟ್ಟ ಬಳಿ ಸ್ಕೂಟರ್ ಅಡ್ಡಗಟ್ಟಿದರು.</p>.<p>ಕೈಲಾಶ್ಗೆ ಲಾಂಗ್ ತೋರಿಸಿದ ದುಷ್ಕರ್ಮಿಗಳು ₹31.30 ಲಕ್ಷ ಹಣವಿದ್ದ ಸ್ಕೂಟರ್ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಘಟನೆ ಸಂಭವಿಸಿದ ಜಾಗದ ಒಂದೆರಡು ಕಿಲೋ ಮೀಟರ್ ದೂರ ಹೋದ ನಂತರ ಸ್ಕೂಟರ್ನಲ್ಲಿದ್ದ ಹಣ ತೆಗೆದುಕೊಂಡು, ಸ್ಕೂಟರ್ ಅಲ್ಲಿಯೇ ಬಿಟ್ಟು ಹೋಗಿದ್ದಾರೆ. ಸಿಸಿಟಿವಿ ಕ್ಯಾಮೆರಾದಲ್ಲಿ ದರೋಡೆಯ ದೃಶ್ಯ ಸೆರೆಯಾಗಿದೆ.</p>.<p>ಕೈಲಾಶ್ ಉಡಾನ್ ಕ್ಯಾಶ್ ಕಲೆಕ್ಟಿಂಗ್ ಕಂಪನಿಯ ಏಜೆಂಟ್ ಆಗಿದ್ದು ಕಳೆದು ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು. ಇ– ಕಾಮರ್ಸ್ ಕಂಪನಿಗಳು ಮತ್ತು ದಾಸ್ತಾನುಗಳಿಂದ ನಗದು ಸಂಗ್ರಹಿಸಿ ತೆರಳುತ್ತಿದ್ದಾಗ ಸಂಜೆ 4.30ಕ್ಕೆ ಮುಖ್ಯರಸ್ತೆಯಲ್ಲೇ ದರೋಡೆ ನಡೆದಿದೆ.</p>.<p>ಸ್ಥಳಕ್ಕೆ ಎಸ್ಪಿ ಚಂದ್ರಕಾಂತ್, ಎಎಸ್ಪಿಗಳಾದ ನಾಗರಾಜು, ವೆಂಕಟೇಶ್ ಪ್ರಸನ್ನ, ಅನೇಕಲ್ ಡಿವೈಎಸ್ಪಿ ಮೋಹನ್ ಕುಮಾರ್ ಮತ್ತು ಬನ್ನೇರುಘಟ್ಟ ಪೊಲೀಸ್ ಇನ್ಸ್ಪೆಕ್ಟರ್ ಕೃಷ್ಣಕುಮಾರ್, ಇನ್ಸ್ಪೆಕ್ಟರ್ಗಳಾದ ರಾಘವೇಂದ್ರ, ನವೀನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬನ್ನೇರುಘಟ್ಟ(ಆನೇಕಲ್): </strong><strong>ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಸಕಲವಾರದ ಬಳಿ ಭಾನುವಾರ </strong><strong>ಹಣ </strong>ಸಾಗಿಸುವ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಾಕಸ್ತ್ರ ತೋರಿಸಿ ₹31.30 ಲಕ್ಷ ದೋಚಿದ್ದಾರೆ.</p>.<p>ಉಡಾನ್ ಕ್ಯಾಶ್ ಕಲೆಕ್ಟಿಂಗ್ ಖಾಸಗಿ ಕಂಪನಿಯ ಹಣ ಸಂಗ್ರಹ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ ಕೈಲಾಶ್ ಭಾನುವಾರ ವಿವಿಧ ಶಾಖೆಗಳಿಗೆ ತೆರಳಿ ₹31,38,625 ಹಣ ಸಂಗ್ರಹಿಸಿ ಸ್ಕೂಟರ್ ಡಿಕ್ಕಿಯಲ್ಲಿ ಇಟ್ಟುಕೊಂಡು ಹೊರಟಿದ್ದ. ಎರಡು ಬೈಕ್ನಲ್ಲಿ ಆತನನ್ನು ಹಿಂಬಾಲಿಸಿಕೊಂಡು ಬಂದ ನಾಲ್ವರು ದುಷ್ಕರ್ಮಿಗಳು ಬನ್ನೇರುಘಟ್ಟ ಬಳಿ ಸ್ಕೂಟರ್ ಅಡ್ಡಗಟ್ಟಿದರು.</p>.<p>ಕೈಲಾಶ್ಗೆ ಲಾಂಗ್ ತೋರಿಸಿದ ದುಷ್ಕರ್ಮಿಗಳು ₹31.30 ಲಕ್ಷ ಹಣವಿದ್ದ ಸ್ಕೂಟರ್ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಘಟನೆ ಸಂಭವಿಸಿದ ಜಾಗದ ಒಂದೆರಡು ಕಿಲೋ ಮೀಟರ್ ದೂರ ಹೋದ ನಂತರ ಸ್ಕೂಟರ್ನಲ್ಲಿದ್ದ ಹಣ ತೆಗೆದುಕೊಂಡು, ಸ್ಕೂಟರ್ ಅಲ್ಲಿಯೇ ಬಿಟ್ಟು ಹೋಗಿದ್ದಾರೆ. ಸಿಸಿಟಿವಿ ಕ್ಯಾಮೆರಾದಲ್ಲಿ ದರೋಡೆಯ ದೃಶ್ಯ ಸೆರೆಯಾಗಿದೆ.</p>.<p>ಕೈಲಾಶ್ ಉಡಾನ್ ಕ್ಯಾಶ್ ಕಲೆಕ್ಟಿಂಗ್ ಕಂಪನಿಯ ಏಜೆಂಟ್ ಆಗಿದ್ದು ಕಳೆದು ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು. ಇ– ಕಾಮರ್ಸ್ ಕಂಪನಿಗಳು ಮತ್ತು ದಾಸ್ತಾನುಗಳಿಂದ ನಗದು ಸಂಗ್ರಹಿಸಿ ತೆರಳುತ್ತಿದ್ದಾಗ ಸಂಜೆ 4.30ಕ್ಕೆ ಮುಖ್ಯರಸ್ತೆಯಲ್ಲೇ ದರೋಡೆ ನಡೆದಿದೆ.</p>.<p>ಸ್ಥಳಕ್ಕೆ ಎಸ್ಪಿ ಚಂದ್ರಕಾಂತ್, ಎಎಸ್ಪಿಗಳಾದ ನಾಗರಾಜು, ವೆಂಕಟೇಶ್ ಪ್ರಸನ್ನ, ಅನೇಕಲ್ ಡಿವೈಎಸ್ಪಿ ಮೋಹನ್ ಕುಮಾರ್ ಮತ್ತು ಬನ್ನೇರುಘಟ್ಟ ಪೊಲೀಸ್ ಇನ್ಸ್ಪೆಕ್ಟರ್ ಕೃಷ್ಣಕುಮಾರ್, ಇನ್ಸ್ಪೆಕ್ಟರ್ಗಳಾದ ರಾಘವೇಂದ್ರ, ನವೀನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>