ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಕೋಟೆಯಲ್ಲಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Last Updated 8 ಜನವರಿ 2019, 12:51 IST
ಅಕ್ಷರ ಗಾತ್ರ

ಹೊಸಕೋಟೆ: ವಿವಿಧ ಕಾರ್ಮಿಕ ಸಂಘಗಳು ಕರೆಕೊಟ್ಟಿದ್ದ ಭಾರತ್ ಬಂದ್ ಗೆ ಹೊಸಕೋಟೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಕೆಲವು ಅಂಗಡಿಗಳು ಬಂದ್ ಆಗಿದ್ದವು.

ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಲು ಹೋದ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ವಿವಿಧ ಸಂಘಟನೆಗಳ ನೂರಾರು ಜನ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಅನಂತರ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮುಖಂಡರು, ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ, ಬ್ಯಾಂಕ್‌ಗಳ ಖಾಸಗೀಕರಣ ಮತ್ತು ಬೆಲೆ ಏರಿಕೆ ಕ್ರಮವನ್ನು ಟೀಕಿಸಿದರು.

ಸಭೆಯಲ್ಲಿ ವಕೀಲರಾದ ಹರೀಂದ್ರ, ರೈತ ಮುಖಂಡ ಮನೋಹರ್ ಮತ್ತು ಜಯಂತ್ ಭಾಗವಹಿಸಿದ್ದರು. ನ್ಯಾಯಾಲಯ ಮತ್ತು ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT