<p>ಹೆಬ್ಬಗೋಡಿ(ಆನೇಕಲ್):<strong> ಬೇಸಿಗೆ ಸಮೀಪಿಸುತ್ತಿದ್ದು, ಆನೇಕಲ್ ತಾಲ್ಲೂಕಿನಲ್ಲಿ ಯಾವುದೇ ಜಲಮೂಲಗಳಿಲ್ಲ. ಹಾಗಾಗಿ ವಿಧಾನಸಭಾ ಕ್ಷೇತ್ರದೆಲ್ಲೆಡೆ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು.</strong></p>.<p>ಹೆಬ್ಬಗೋಡಿ ನಗರಸಭೆಯ 15ನೇ ವಾರ್ಡ್ನಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.</p>.<p>ಶುದ್ಧ ನೀರನ್ನು ಕುಡಿಯುವುದರಿಂದ ಹಲವು ರೋಗಗಳಿಂದ ದೂರ ಇರಬಹುದು. ಹಾಗಾಗಿ ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿಯು ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆಗೆ ಒತ್ತು ನೀಡಲಾಗಿದೆ. ಉತ್ತಮ ನಿರ್ವಹಣೆ ಮಾಡುವಂತೆ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದರು.</p>.<p>ಹೆಬ್ಬಗೋಡಿ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ತಾಲ್ಲೂಕಿನ ಐದು ಕೈಗಾರಿಕ ಪ್ರದೇಶಗಳಿಗೆ ಸಮೀಪದಲ್ಲಿದೆ. ಹಾಗಾಗಿಯೇ ಜನಸಂಖ್ಯೆ ಹೆಚ್ಚಿದ್ದು ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಭಾಗದಲ್ಲಿ ಶುದ್ಧ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಪ್ರತಿ ವಾರ್ಡ್ನಲ್ಲಿಯೂ ಘಟಕ ಸ್ಥಾಪಿಸಲು ಪೌರಾಯುಕ್ತರಿಗೆ ಸೂಚಿಸಲಾಗಿದೆ. ಸರ್ಕಾರಿ ಜಾಗಗಳನ್ನು ಗುರುತಿಸಿ ಕಂಪನಿಗಳ ನೆರವು ಮತ್ತು ನಗರಸಭೆಯ ಅನುದಾನದಡಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಬೇಕು ಎಂದು ತಿಳಿಸಿದರು.</p>.<p>ಹೆಬ್ಬಗೋಡಿ ನಗರಸಭೆ ಅಧ್ಯಕ್ಷ ಸುಜಾತ ಹರೀಶ್, ಸ್ಥಾಯಿ ಸಮಿತಿ ಅಧ್ಯಕ್ಷ ಜಯರಾಮ್, ಪೌರಾಯುಕ್ತ ರಾಜೇಂದ್ರ, ಸದಸ್ಯರಾದ ಸುನಂದಾ ವೆಂಕಟೇಶ್, ಮಂಜುನಾಥರೆಡ್ಡಿ, ಕಬಡ್ಡಿ ಮಂಜು, ಅರುಣ್ ಕುಮಾರ್, ಜ್ಯೋತಿ ಕೃಷ್ಣ, ಲಕ್ಷ್ಮೀನಾರಾಯಣ್, ಶರಣ್ಯ ಪ್ರಕಾಶ್, ಮುಖಂಡರಾದ ಶ್ರೀರಾಮರೆಡ್ಡಿ, ಮುನಿಕೃಷ್ಣ, ಮುರಳಿ, ವೆಂಕಟೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೆಬ್ಬಗೋಡಿ(ಆನೇಕಲ್):<strong> ಬೇಸಿಗೆ ಸಮೀಪಿಸುತ್ತಿದ್ದು, ಆನೇಕಲ್ ತಾಲ್ಲೂಕಿನಲ್ಲಿ ಯಾವುದೇ ಜಲಮೂಲಗಳಿಲ್ಲ. ಹಾಗಾಗಿ ವಿಧಾನಸಭಾ ಕ್ಷೇತ್ರದೆಲ್ಲೆಡೆ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು.</strong></p>.<p>ಹೆಬ್ಬಗೋಡಿ ನಗರಸಭೆಯ 15ನೇ ವಾರ್ಡ್ನಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.</p>.<p>ಶುದ್ಧ ನೀರನ್ನು ಕುಡಿಯುವುದರಿಂದ ಹಲವು ರೋಗಗಳಿಂದ ದೂರ ಇರಬಹುದು. ಹಾಗಾಗಿ ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿಯು ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆಗೆ ಒತ್ತು ನೀಡಲಾಗಿದೆ. ಉತ್ತಮ ನಿರ್ವಹಣೆ ಮಾಡುವಂತೆ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದರು.</p>.<p>ಹೆಬ್ಬಗೋಡಿ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ತಾಲ್ಲೂಕಿನ ಐದು ಕೈಗಾರಿಕ ಪ್ರದೇಶಗಳಿಗೆ ಸಮೀಪದಲ್ಲಿದೆ. ಹಾಗಾಗಿಯೇ ಜನಸಂಖ್ಯೆ ಹೆಚ್ಚಿದ್ದು ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಭಾಗದಲ್ಲಿ ಶುದ್ಧ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಪ್ರತಿ ವಾರ್ಡ್ನಲ್ಲಿಯೂ ಘಟಕ ಸ್ಥಾಪಿಸಲು ಪೌರಾಯುಕ್ತರಿಗೆ ಸೂಚಿಸಲಾಗಿದೆ. ಸರ್ಕಾರಿ ಜಾಗಗಳನ್ನು ಗುರುತಿಸಿ ಕಂಪನಿಗಳ ನೆರವು ಮತ್ತು ನಗರಸಭೆಯ ಅನುದಾನದಡಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಬೇಕು ಎಂದು ತಿಳಿಸಿದರು.</p>.<p>ಹೆಬ್ಬಗೋಡಿ ನಗರಸಭೆ ಅಧ್ಯಕ್ಷ ಸುಜಾತ ಹರೀಶ್, ಸ್ಥಾಯಿ ಸಮಿತಿ ಅಧ್ಯಕ್ಷ ಜಯರಾಮ್, ಪೌರಾಯುಕ್ತ ರಾಜೇಂದ್ರ, ಸದಸ್ಯರಾದ ಸುನಂದಾ ವೆಂಕಟೇಶ್, ಮಂಜುನಾಥರೆಡ್ಡಿ, ಕಬಡ್ಡಿ ಮಂಜು, ಅರುಣ್ ಕುಮಾರ್, ಜ್ಯೋತಿ ಕೃಷ್ಣ, ಲಕ್ಷ್ಮೀನಾರಾಯಣ್, ಶರಣ್ಯ ಪ್ರಕಾಶ್, ಮುಖಂಡರಾದ ಶ್ರೀರಾಮರೆಡ್ಡಿ, ಮುನಿಕೃಷ್ಣ, ಮುರಳಿ, ವೆಂಕಟೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>