<p><strong>ಆನೇಕಲ್:</strong> ಪುರಸಭೆ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ₹91.93 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕ ಬಿ.ಶಿವಣ್ಣ ಸೋಮವಾರ ಭೂಮಿಪೂಜೆ ನೆರವೇರಿಸಿದರು.</p>.<p>ಅಮೃತ್ ಯೋಜನೆಯಡಿ ಪುರಸಭೆ, ಕೇಂದ್ರ ಮತ್ತು ರಾಜ್ಯ ಸರ್ಕಾರ ಸಹಭಾಗಿತ್ವದಲ್ಲಿ ಕೈಗೊಳ್ಳಲಾಗಿರುವ ಈ ಯೋಜನೆಯಡಿ ಹೊಸ ಮಾಧ್ಯಮಿಕ ಶಾಲಾ ಮೈದಾನ, ಆಶ್ರಯ ಬಡಾವಣೆ ಮತ್ತು ಸಂತೆ ಮೈದಾನದಲ್ಲಿ ತಲಾ 15 ಲಕ್ಷ ಲೀಟರ್ ಸಾಮರ್ಥ್ಯದ ಓವರ್ ಹೆಡ್ ಟ್ಯಾಂಕ್, ಚಿಕ್ಕಕೆರೆ ಆಟದ ಮೈದಾನದಲ್ಲಿ 15 ಲಕ್ಷ ಲೀಟರ್ ಸಾಮರ್ಥ್ಯದ ಜಲಸಂಗ್ರಹಗಾರ, ಚಿಕ್ಕಕೆರೆ ಪಂಪ್ ಹೌಸ್ನಲ್ಲಿ 2 ಲಕ್ಷ ಲೀಟರ್ ಸಾಮರ್ಥ್ಯದ ಸಂಗ್ರಹಣಾ ಘಟಕ ಮತ್ತು ಪಟ್ಟಣದಲ್ಲಿ 75 ಕಿ.ಮೀ. ಉದ್ದದ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಕೆ ಕಾಮಗಾರಿಗೆ ಚಾಲನೆ ನೀಡಲಾಯಿತು.</p>.<p>ಶಾಸಕ ಬಿ.ಶಿವಣ್ಣ ಮಾತನಾಡಿ, ತಾಲ್ಲೂಕಿಗೆ ಯಾವುದೇ ಶಾಶ್ವತ ಜಲಮೂಲಗಳಿಲ್ಲ. ಬಹುತೇಕ ವಾರ್ಡ್ಗಳು ಅಂತರ್ಜಲ ಅವಲಂಬಿಸಿವೆ. 75 ಕಿ.ಮೀ. ಪೈಪ್ಲೈನ್ ಕಾಮಗಾರಿಯಿಂದ ಶೇ 95ರಷ್ಟು ವಾರ್ಡ್ಗಳಿಗೆ ನೀರು ಪೂರೈಸಲು ಅನುಕೂಲವಾಗಲಿದೆ. 2-3 ದಿನಗಳಿಗೊಮ್ಮೆ ನೀರು ಪೂರೈಸಬಹುದಾಗಿದೆ. ಆಶ್ರಯ ಬಡಾವಣೆಯಲ್ಲಿ ನಿರ್ಮಾಣವಾಗುವ 15 ಲಕ್ಷ ಲೀಟರ್ ಸಾಮರ್ಥ್ಯದ ಟ್ಯಾಂಕ್ನಿಂದ ಅಲ್ಲಿನ ನಿವಾಸಿಗಳ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ ಎಂದರು.</p>.<p>ಪುರಸಭಾ ಮಾಜಿ ಅಧ್ಯಕ್ಷ ಎನ್.ಎಸ್.ಪದ್ಮನಾಭ ಮಾತನಾಡಿ, 2022ರಲ್ಲಿ ಸಂಸದರಾಗಿದ್ದ ಡಿ.ಕೆ.ಸುರೇಶ್ ಮತ್ತು ಶಾಸಕ ಬಿ.ಶಿವಣ್ಣ ಅವರ ಪ್ರಯತ್ನದಿಂದ ಯೋಜನೆ ಮಂಜೂರಾಗಿತ್ತು. ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದ್ದ ಯೋಜನೆ ಈಗ ವೇಗ ಪಡೆದುಕೊಂಡಿದೆ. ಮುಂದಿನ ಒಂದು ವರ್ಷದೊಳಗೆ ನೀರಿನ ಸಮಸ್ಯೆ ಸಂಪೂರ್ಣ ಪರಿಹಾರವಾಗಲಿದೆ ಎಂದರು.</p>.<p>ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಹಾಗಡೆ ಹರೀಶ್ ಗೌಡ, ಟೌನ್ ಕಾಂಗ್ರೆಸ್ ಅಧ್ಯಕ್ಷ ಜಿ.ಗೋಪಾಲ್, ಪುರಸಭಾ ಮುಖ್ಯಾಧಿಕಾರಿ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್:</strong> ಪುರಸಭೆ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ₹91.93 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕ ಬಿ.ಶಿವಣ್ಣ ಸೋಮವಾರ ಭೂಮಿಪೂಜೆ ನೆರವೇರಿಸಿದರು.</p>.<p>ಅಮೃತ್ ಯೋಜನೆಯಡಿ ಪುರಸಭೆ, ಕೇಂದ್ರ ಮತ್ತು ರಾಜ್ಯ ಸರ್ಕಾರ ಸಹಭಾಗಿತ್ವದಲ್ಲಿ ಕೈಗೊಳ್ಳಲಾಗಿರುವ ಈ ಯೋಜನೆಯಡಿ ಹೊಸ ಮಾಧ್ಯಮಿಕ ಶಾಲಾ ಮೈದಾನ, ಆಶ್ರಯ ಬಡಾವಣೆ ಮತ್ತು ಸಂತೆ ಮೈದಾನದಲ್ಲಿ ತಲಾ 15 ಲಕ್ಷ ಲೀಟರ್ ಸಾಮರ್ಥ್ಯದ ಓವರ್ ಹೆಡ್ ಟ್ಯಾಂಕ್, ಚಿಕ್ಕಕೆರೆ ಆಟದ ಮೈದಾನದಲ್ಲಿ 15 ಲಕ್ಷ ಲೀಟರ್ ಸಾಮರ್ಥ್ಯದ ಜಲಸಂಗ್ರಹಗಾರ, ಚಿಕ್ಕಕೆರೆ ಪಂಪ್ ಹೌಸ್ನಲ್ಲಿ 2 ಲಕ್ಷ ಲೀಟರ್ ಸಾಮರ್ಥ್ಯದ ಸಂಗ್ರಹಣಾ ಘಟಕ ಮತ್ತು ಪಟ್ಟಣದಲ್ಲಿ 75 ಕಿ.ಮೀ. ಉದ್ದದ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಕೆ ಕಾಮಗಾರಿಗೆ ಚಾಲನೆ ನೀಡಲಾಯಿತು.</p>.<p>ಶಾಸಕ ಬಿ.ಶಿವಣ್ಣ ಮಾತನಾಡಿ, ತಾಲ್ಲೂಕಿಗೆ ಯಾವುದೇ ಶಾಶ್ವತ ಜಲಮೂಲಗಳಿಲ್ಲ. ಬಹುತೇಕ ವಾರ್ಡ್ಗಳು ಅಂತರ್ಜಲ ಅವಲಂಬಿಸಿವೆ. 75 ಕಿ.ಮೀ. ಪೈಪ್ಲೈನ್ ಕಾಮಗಾರಿಯಿಂದ ಶೇ 95ರಷ್ಟು ವಾರ್ಡ್ಗಳಿಗೆ ನೀರು ಪೂರೈಸಲು ಅನುಕೂಲವಾಗಲಿದೆ. 2-3 ದಿನಗಳಿಗೊಮ್ಮೆ ನೀರು ಪೂರೈಸಬಹುದಾಗಿದೆ. ಆಶ್ರಯ ಬಡಾವಣೆಯಲ್ಲಿ ನಿರ್ಮಾಣವಾಗುವ 15 ಲಕ್ಷ ಲೀಟರ್ ಸಾಮರ್ಥ್ಯದ ಟ್ಯಾಂಕ್ನಿಂದ ಅಲ್ಲಿನ ನಿವಾಸಿಗಳ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ ಎಂದರು.</p>.<p>ಪುರಸಭಾ ಮಾಜಿ ಅಧ್ಯಕ್ಷ ಎನ್.ಎಸ್.ಪದ್ಮನಾಭ ಮಾತನಾಡಿ, 2022ರಲ್ಲಿ ಸಂಸದರಾಗಿದ್ದ ಡಿ.ಕೆ.ಸುರೇಶ್ ಮತ್ತು ಶಾಸಕ ಬಿ.ಶಿವಣ್ಣ ಅವರ ಪ್ರಯತ್ನದಿಂದ ಯೋಜನೆ ಮಂಜೂರಾಗಿತ್ತು. ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದ್ದ ಯೋಜನೆ ಈಗ ವೇಗ ಪಡೆದುಕೊಂಡಿದೆ. ಮುಂದಿನ ಒಂದು ವರ್ಷದೊಳಗೆ ನೀರಿನ ಸಮಸ್ಯೆ ಸಂಪೂರ್ಣ ಪರಿಹಾರವಾಗಲಿದೆ ಎಂದರು.</p>.<p>ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಹಾಗಡೆ ಹರೀಶ್ ಗೌಡ, ಟೌನ್ ಕಾಂಗ್ರೆಸ್ ಅಧ್ಯಕ್ಷ ಜಿ.ಗೋಪಾಲ್, ಪುರಸಭಾ ಮುಖ್ಯಾಧಿಕಾರಿ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>