‘ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗಬೇಕೆಂದು ಅವರದ್ದೇ ಪಕ್ಷದ ಮುಖಂಡರು ಒತ್ತಾಯಿಸುತ್ತಿದ್ದಾರೆ. ಆದರೆ, ಅಧ್ಯಕ್ಷರಾಗಲು ರಾಹುಲ್ ಅವರಿಗೇ ಮನಸ್ಸಿಲ್ಲ. ಪಕ್ಷದಲ್ಲಿಯೇ ಒಗ್ಗಟ್ಟು ಇಲ್ಲದ ಅವರು, ಭಾರತ್ ಜೋಡೊ ಪಾದಯಾತ್ರೆ ಮಾಡುತ್ತಿರುವುದು ಹಾಸ್ಯಾಸ್ಪದ. ಈಗಾಗಲೇ ಗೋವಾದಲ್ಲಿ ಎಂಟು ಮಂದಿ ಶಾಸಕರು ಪಕ್ಷ ತೊರೆದಿದ್ದಾರೆ. ಮುಂದೆಯೂ ಪಕ್ಷ ತೊರೆಯುವ ಸಿದ್ಧತೆಯಲ್ಲಿದ್ದಾರೆ. ಮೊದಲು ಅವರು ತಮ್ಮ ಪಕ್ಷ ಜೋಡಿಸಲಿ’ ಎಂದು ವ್ಯಂಗ್ಯವಾಡಿದರು.