<p><strong>ದೊಡ್ಡಬಳ್ಳಾಪುರ: </strong>ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ತಾಲ್ಲೂಕು ಪಂಚಾಯಿತಿ ವತಿಯಿಂದ ಪೋಸ್ಟರ್ ಬಿಡುಗಡೆ ಮಾಡಲಾಯಿತು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಮುರುಡಯ್ಯ, ‘ಸಾರ್ವಜನಿಕರಿಗೆ ಮನ್ರೆಗಾ ಯೋಜನೆಯಲ್ಲಿ ಉದ್ಯೋಗವಕಾಶಗಳು ಲಭ್ಯವಿದೆ. ಕೊರೊನೊದಿಂದಾಗಿ ಸಂಕಷ್ಟದಲ್ಲಿರುವವರಿಗೂ ವರದಾನವಾಗಿದೆ. ಮಾಹಿತಿ ತಿಳಿಯಲು ಇಂತಹ ಐ.ಇ.ಸಿ ಚಟುವಟಿಕೆ ಕೈಗೊಳ್ಳಬೇಕು ಹಾಗೂ ಪೋಸ್ಟರ್ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರಕಟಿಸಿ ಪ್ರಚಾರ ಕೈಗೊಳ್ಳಬೇಕು‘ ಎಂದು ಸೂಚಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕಿ ಸಿ.ಗೀತಾಮಣಿ ಮಾತನಾಡಿ, ‘ಸಾರ್ವಜನಿಕರು ವಿವಿಧ ಅನುಷ್ಠಾನ ಇಲಾಖೆಗಳಿಂದ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಕೃಷಿಹೊಂಡ ಇಂಗು ಗುಂಡಿ ಕಿಚನ್ ಗಾರ್ಡನ್ ಸೋಕ್ ಪಿಟ್ ನಿರ್ಮಾಣ ಮಾಡಿಕೊಳ್ಳುವಂತೆ’ ತಿಳಿಸಿದರು.</p>.<p>ಗ್ರಾಮೀಣ ಮತ್ತು ಕುಡಿಯುವ ನೀರು ಇಲಾಖೆಯ ಎಇಇ ಯೋಗೀಶ್,ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಪ್ರಕಾಶ್, ನಂದಿನಿ, ನಂದಕುಮಾರ್, ಮಲ್ಲೇಶ್, ಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ತಾಲ್ಲೂಕು ಪಂಚಾಯಿತಿ ವತಿಯಿಂದ ಪೋಸ್ಟರ್ ಬಿಡುಗಡೆ ಮಾಡಲಾಯಿತು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಮುರುಡಯ್ಯ, ‘ಸಾರ್ವಜನಿಕರಿಗೆ ಮನ್ರೆಗಾ ಯೋಜನೆಯಲ್ಲಿ ಉದ್ಯೋಗವಕಾಶಗಳು ಲಭ್ಯವಿದೆ. ಕೊರೊನೊದಿಂದಾಗಿ ಸಂಕಷ್ಟದಲ್ಲಿರುವವರಿಗೂ ವರದಾನವಾಗಿದೆ. ಮಾಹಿತಿ ತಿಳಿಯಲು ಇಂತಹ ಐ.ಇ.ಸಿ ಚಟುವಟಿಕೆ ಕೈಗೊಳ್ಳಬೇಕು ಹಾಗೂ ಪೋಸ್ಟರ್ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರಕಟಿಸಿ ಪ್ರಚಾರ ಕೈಗೊಳ್ಳಬೇಕು‘ ಎಂದು ಸೂಚಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕಿ ಸಿ.ಗೀತಾಮಣಿ ಮಾತನಾಡಿ, ‘ಸಾರ್ವಜನಿಕರು ವಿವಿಧ ಅನುಷ್ಠಾನ ಇಲಾಖೆಗಳಿಂದ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಕೃಷಿಹೊಂಡ ಇಂಗು ಗುಂಡಿ ಕಿಚನ್ ಗಾರ್ಡನ್ ಸೋಕ್ ಪಿಟ್ ನಿರ್ಮಾಣ ಮಾಡಿಕೊಳ್ಳುವಂತೆ’ ತಿಳಿಸಿದರು.</p>.<p>ಗ್ರಾಮೀಣ ಮತ್ತು ಕುಡಿಯುವ ನೀರು ಇಲಾಖೆಯ ಎಇಇ ಯೋಗೀಶ್,ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಪ್ರಕಾಶ್, ನಂದಿನಿ, ನಂದಕುಮಾರ್, ಮಲ್ಲೇಶ್, ಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>