ದೊಡ್ಡಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ಅವರ 70ನೇ ಜನ್ಮ ದಿನಾಚರಣೆಯನ್ನು ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ತಾಲ್ಲೂಕಿನ ರಾಜಘಟ್ಟ ಆಂಜನೇಯಸ್ವಾಮಿ ದೇವಾಲಯದ ಆವರಣ ಸ್ವಚ್ಛ ಮಾಡುವ ಮೂಲಕ ಆಚರಿಸಲಾಯಿತು.
ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ವಿಶ್ವಾಸ್ಗೌಡ ಮಾತನಾಡಿ, ‘ದೇಶ ಕಂಡ ಅಪ್ರತಿಮ ಪ್ರಧಾನಿ ಮೋದಿ ಅವರು ಕೋವಿಡ್-19 ಸಂಕಷ್ಟದಲ್ಲಿಯೂ ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಇವರ ಜನ್ಮ ದಿನವನ್ನು ಸೇವಾ ದಿನಾಚರಣೆಯನ್ನಾಗಿ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ. ಬಿಜೆಪಿ ಕಾರ್ಯಕರ್ತರು ಹಾಗೂ ಮೋದಿ ಅಭಿಮಾನಿಗಳು ವಿವಿಧ ಸೇವಾ ಕಾರ್ಯಗಳನ್ನು ಕೈಗೊಂಡಿದ್ದಾರೆ ಶ್ಲಾಘನೀಯ’ ಎಂದರು.
ಮಂಡಲ ಅಧ್ಯಕ್ಷ ಕಿರಣ್,ಅನಿಲ್,ಅಜಯ್,ಲೋಕೇಶ್,ಚಂದನ, ವಿನಯ್, ನರೇಶ್, ಯಶವಂತ, ಜನಪರಮಂಜು, ಶಿವು ಹಾಗೂ ಯುವ ಮೋರ್ಚಾ ಪದಾಧಿಕಾರಿಗಳು ಇದ್ದರು.