ಎಪಿಎಂಸಿ ಅಧ್ಯಕ್ಷ ಕೆ.ವಿ.ಮಂಜುನಾಥ್ ಮಾತನಾಡಿ, ‘ಕೋಡಗುರ್ಕಿ ಗ್ರಾಮದಲ್ಲಿ ಊರ ಹಬ್ಬದ ಅಂಗವಾಗಿ ಬಾಡೂಟ ಏರ್ಪಡಿಸಲಾಗಿತ್ತು. ಸ್ಥಳೀಯ ಜೆಡಿಎಸ್ ಶಾಸಕ ನಿಸರ್ಗ ನಾರಾಯಣಸ್ವಾಮಿ ನಮ್ಮ ಪಕ್ಷದವರು. ಅವರನ್ನು ಸಂಪರ್ಕಿಸಿ ಊಟಕ್ಕೆ ಒತ್ತಾಯಿಸಿದ್ದೇನೆ. ಜತೆಗೆ ಶಾಸಕರಾದ ಬಂಡೆಪ್ಪ ಕಾಶೆಂಪೂರ ಮತ್ತು ಶ್ರೀನಿವಾಸಮೂರ್ತಿ ಬಂದು ಊಟ ಮಾಡಿಕೊಂಡು ಹೋಗಿದ್ದಾರೆ. ಅದರಲ್ಲಿ ತಪ್ಪೇನಿದೆ’ ಎಂದು ಕೇಳಿದರು.