<p><strong>ದೊಡ್ಡಬಳ್ಳಾಪುರ</strong>: ಹಾಲು ಉತ್ಪಾದಕ ರೈತರ ಕುಂದು ಕೊರತೆಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಪ್ರತಿ ವರ್ಷವು ತಾಲ್ಲೂಕು ಮಟ್ಟದಲ್ಲಿ ಅಧ್ಯಕ್ಷರು ಮತ್ತು ಮುಖ್ಯಕಾರ್ಯನಿರ್ವಾಹಕರ ಪ್ರಾದೇಶಿಕ ಸಭೆ ನಡೆಸಲಾಗುತ್ತಿದೆ ಎಂದು ಬಮೂಲ್ ನಿರ್ದೇಶಕ ಬಿ.ಸಿ.ಆನಂದಕುಮಾರ್ ಹೇಳಿದರು.</p><p>ನಗರದ ಬಮೂಲ್ ಶಿಬಿರ ಕಚೇರಿಯಲ್ಲಿ ಗುರುವಾರ ನಡೆದ ಎಂಪಿಸಿಎಸ್(ಪ್ರಾಥಮಿಕ ಹಾಲು ಉತ್ಪಾದಕ ಸಹಕಾರ ಸಂಘಗಳು) ರೈತರ ಪ್ರಾದೇಶಿಕ ವಾರ್ಷಿಕ ಸಭೆಯಲ್ಲಿ ಮಾತನಾಡಿದರು.</p><p>ಹಾಲು ಉತ್ಪಾದಕರ ಸಂಘಗಳ ನಿರ್ವಹಣೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿರುವ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಪ್ರಶಂಸನಾ ಪತ್ರ, ಬಹುಮಾನ ನೀಡುವ ಮೂಲಕ ಗೌರವಿಸಲಾಗುತ್ತಿದೆ. ತಾಲ್ಲೂಕಿನಲ್ಲಿ ಹಾಲು ಉತ್ಪಾದನೆ ಉತ್ತಮ ಸ್ಥಿತಿಯಲ್ಲಿದ್ದು, ಮೂಲ ಸೌಕರ್ಯ ಕಲ್ಪಿಸಲಾಗುತ್ತಿದೆ ಎಂದರು.</p><p>ಉತ್ತಮ ಗುಣಮಟ್ಟದ ಹಾಲು ಉತ್ಪಾದನೆಗೆ ರೈತರು ಆದ್ಯತೆ ನೀಡಬೇಕು ಎಂದರು.</p><p>ಸಭೆಯಲ್ಲಿ ಬಮೂಲ್ ಅಧ್ಯಕ್ಷ ರಾಜಕುಮಾರ್, ಶಿಬಿರ ಕಚೇರಿ ವ್ಯವಸ್ಥಾಪಕ ಡಾ.ವಿ.ನಾಗರಾಜು, ಪಶುವೈದ್ಯ ಡಾ. ಜಿಯಾಉಲ್ಲಾ, ಡಾ.ಶ್ರೀಧರ್, ಎಂಪಿಸಿಎಸ್ ನೌಕರರ ಸಂಘದ ಅಧ್ಯಕ್ಷ ರವಿಂದ್ರಕುಮಾರ್, ಉಪಾಧ್ಯಕ್ಷ ಎಂ.ಡಿ.ದೇವರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ</strong>: ಹಾಲು ಉತ್ಪಾದಕ ರೈತರ ಕುಂದು ಕೊರತೆಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಪ್ರತಿ ವರ್ಷವು ತಾಲ್ಲೂಕು ಮಟ್ಟದಲ್ಲಿ ಅಧ್ಯಕ್ಷರು ಮತ್ತು ಮುಖ್ಯಕಾರ್ಯನಿರ್ವಾಹಕರ ಪ್ರಾದೇಶಿಕ ಸಭೆ ನಡೆಸಲಾಗುತ್ತಿದೆ ಎಂದು ಬಮೂಲ್ ನಿರ್ದೇಶಕ ಬಿ.ಸಿ.ಆನಂದಕುಮಾರ್ ಹೇಳಿದರು.</p><p>ನಗರದ ಬಮೂಲ್ ಶಿಬಿರ ಕಚೇರಿಯಲ್ಲಿ ಗುರುವಾರ ನಡೆದ ಎಂಪಿಸಿಎಸ್(ಪ್ರಾಥಮಿಕ ಹಾಲು ಉತ್ಪಾದಕ ಸಹಕಾರ ಸಂಘಗಳು) ರೈತರ ಪ್ರಾದೇಶಿಕ ವಾರ್ಷಿಕ ಸಭೆಯಲ್ಲಿ ಮಾತನಾಡಿದರು.</p><p>ಹಾಲು ಉತ್ಪಾದಕರ ಸಂಘಗಳ ನಿರ್ವಹಣೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿರುವ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಪ್ರಶಂಸನಾ ಪತ್ರ, ಬಹುಮಾನ ನೀಡುವ ಮೂಲಕ ಗೌರವಿಸಲಾಗುತ್ತಿದೆ. ತಾಲ್ಲೂಕಿನಲ್ಲಿ ಹಾಲು ಉತ್ಪಾದನೆ ಉತ್ತಮ ಸ್ಥಿತಿಯಲ್ಲಿದ್ದು, ಮೂಲ ಸೌಕರ್ಯ ಕಲ್ಪಿಸಲಾಗುತ್ತಿದೆ ಎಂದರು.</p><p>ಉತ್ತಮ ಗುಣಮಟ್ಟದ ಹಾಲು ಉತ್ಪಾದನೆಗೆ ರೈತರು ಆದ್ಯತೆ ನೀಡಬೇಕು ಎಂದರು.</p><p>ಸಭೆಯಲ್ಲಿ ಬಮೂಲ್ ಅಧ್ಯಕ್ಷ ರಾಜಕುಮಾರ್, ಶಿಬಿರ ಕಚೇರಿ ವ್ಯವಸ್ಥಾಪಕ ಡಾ.ವಿ.ನಾಗರಾಜು, ಪಶುವೈದ್ಯ ಡಾ. ಜಿಯಾಉಲ್ಲಾ, ಡಾ.ಶ್ರೀಧರ್, ಎಂಪಿಸಿಎಸ್ ನೌಕರರ ಸಂಘದ ಅಧ್ಯಕ್ಷ ರವಿಂದ್ರಕುಮಾರ್, ಉಪಾಧ್ಯಕ್ಷ ಎಂ.ಡಿ.ದೇವರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>