ಶಾಸಕ ಬೈರತಿ ಸುರೇಶ್ಮಾತನಾಡಿ, ‘ಎಂ.ಟಿ.ಬಿ. ನಾಗರಾಜ್ ಅಧಿಕಾರಿಗಳಿಗೆ ಬೆದರಿಕೆ ಹಾಕಿ ನಮ್ಮ ಕಾರ್ಯಕರ್ತರನ್ನು ಅನವಶ್ಯಕವಾಗಿ ಬಂಧಿಸಿ, ಕಿರುಕುಳ ಕೊಡುತ್ತಿದ್ದಾರೆ. ರವಿ ತನಗೆ ಬಂದ ವಿಷಯವನ್ನು ಕೇವಲ ಫಾರ್ವಡ್ ಮಾಡಿದ್ದಾನೆ. ಅದಕ್ಕೆ ಅವನನ್ನು ಬಂಧಿಸಿ ಬಿಜೆಪಿಯವರು ತಾಲ್ಲೂಕಿನಲ್ಲಿ ಭಯದ ವಾತಾವರಣ ನಿರ್ಮಾಣ ಮಾಡುತ್ತಿದ್ದು, ಅದಕ್ಕೆ ತಮ್ಮ ಪಕ್ಷದ ಯಾವುದೇ ಕಾರ್ಯಕರ್ತ ಬೆದರುವುದಿಲ್ಲ. ಈ ಬಾರಿ ಬಿಜೆಪಿಯನ್ನು ತಾಲ್ಲೂಕಿನಿಂದ ಓಡಿಸುತ್ತೇವೆ’ ಎಂದರು.