ಸಚಿವರ ಸ್ಪಷ್ಟನೆ: ‘ಸಮುದಾಯದ ಕನಕ ಸಮೃದ್ಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪ್ರಾರಂಭಿಸಲಾಗಿದೆ. ಇದರ ಉದ್ಘಾಟನೆಗಾಗಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗಿತ್ತು. ಇದೇ ಸಂದರ್ಭದಲ್ಲಿ ಆಯೋಜಕರು ಊಟದ ವ್ಯವಸ್ಥೆ ಮಾಡಿದ್ದರು. ಆಗ ನಾವಿಬ್ಬರೂ ಒಂದೇ ಟೇಬಲ್ನಲ್ಲಿ ಭೋಜನ ಮಾಡಿದ್ದು ಬಿಟ್ಟರೆ ಮತ್ತೇನೂ ವಿಶೇಷತೆ ಇಲ್ಲ. ಅದನ್ನು ರಾಜಕೀಯವಾಗಿ ನೋಡುವುದು ಬೇಡ’ ಎಂದು ಸಚಿವ ನಾಗರಾಜ್ ಸ್ಪಷ್ಟಪಡಿಸಿದರು.