<p><strong>ಮುಗಬಾಳ(ಹೊಸಕೋಟೆ): </strong>ರೈತರ ಜಮೀನಿನಲ್ಲಿರುವ ವಿದ್ಯುತ್ ಕಂಬಗಳು ಶಿಥಿಲಗೊಂಡು ವಿದ್ಯುತ್ ತಂತಿ ಬಾಗುತ್ತಿದೆ. ಕೆಲವೆಡೆ ತಂತಿಗಳು ತುಂಡರಿಸಿದ್ದು, ಅಪಾಯ ಆಹ್ವಾನಿಸುತ್ತಿದೆ.</p>.<p>ಮುಗಬಾಳ ಪಂಚಾಯಿತಿ ವ್ಯಾಪ್ತಿಯ ಕೆಂಬಡಿಗಾನಹಳ್ಳಿ ರೈತರ ತೋಟಗಳಲ್ಲಿ ವಿದ್ಯುತ್ ತಂತಿಗಳು ಕೈಗೆ ಸಿಗುವಷ್ಟು ಕೆಳೆಗೆ ನೇತಾಡುತ್ತಿವೆ. ಕಂಬ ಮುರಿದು ಬೀಳುವ ಸ್ಥಿತಿ ತಲುಪಿದೆ. ಈ ಬಗ್ಗೆ ಬೆಸ್ಕಾಂ ಅಧಿಕಾರಿಗಳಿಗೆ ಹಲವು ಬಾರಿ ಮನವಿ ನೀಡಿದರೂ ಕ್ಯಾರೇ ಎನ್ನುತ್ತಿಲ್ಲ. </p>.<p>ಈಚೆಗೆ ಮುಗಬಾಳ, ಜಡಿಗೇನಹಳ್ಳಿ, ಹೆತ್ತಕ್ಕಿ ಮೊದಲಾದ ಪಂಚಾಯಿತಿ ವ್ಯಾಪ್ತಿಯಲ್ಲಿ 40ಕ್ಕೂ ಹೆಚ್ಚು ರೈತರ ಅನಧಿಕೃತ ನೀರಾವರಿ ಪಂಪ್ಸೆಟ್ ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಕಾರ್ಯಾಚರಣೆ ನಡೆಸಿದ್ದರೂ, ಇದೇ ಗ್ರಾಮ ಪಂಚಾಯಿತಿ ವಿದ್ಯುತ್ ಕಂಬಗಳು ಹಾಗೂ ತಂತಿಗಳು ಅಪಾಯ ಸ್ಥಿತಿಯಲ್ಲಿದ್ದರೂ ನಿರ್ಲಕ್ಷ್ಯವಹಿಸಿದ್ದಾರೆ.</p>.<p><strong>‘</strong>ಈ ಹಿಂದೆಯೇ ಒಮ್ಮೆ ಕುರಿಗಾಹಿಗಳಿಗೆ ವಿದ್ಯುತ್ ಸ್ಪರ್ಶವಾಗಿ ಸ್ವಲ್ಪ ಅಂತರದಲ್ಲಿ ರಾಣಪಾಯದಿಂದ ಪಾರಾಗಿದ್ದಾರೆ. ಇಷ್ಟಾದರೂ ವಿದ್ಯುತ್ ತಂತಿ ಸರಿಪಡಿಸಿಲ್ಲ. ಶಿಥಿಲ ಕಂಬಗಳನ್ನು ಬದಲಿಸಿಲ್ಲ. ರೈತರ ಪ್ರಾಣಕ್ಕೆ ಬೆಲೆ ಇಲ್ಲವೇ’ ಕೆಂಬಡಿಗಾನಹಳ್ಳಿಯ ರೈತ ಮಹಿಳೆ ಕಮಲ ಪ್ರಶ್ನಿಸಿದ್ದಾರೆ.</p>.<p>‘ವಿದ್ಯುತ್ ಕಂಬಗಳು ತಂತಿ ಸಮೇತ ಬಾಗಿದೆ. ಪ್ರತಿನಿತ್ಯ ಈ ಭಾಗದ ಮೂಲಕವೇ ರೈತರು ತಮ್ಮ ಜಮೀನುಗಳಿಗೆ ಮತ್ತು ಜಾನುವಾರುಗಳ ಮೈ ತೊಳೆಯಲು ಕೆರೆಗೆ ತೆರಳಬೇಕಿದೆ. ಇಂಥ ಸಂದರ್ಭದಲ್ಲಿ ಏನಾದರೂ ಅನಾಹುತ ಸಂಭವಿಸಿದರೆ ಯಾರು ಹೊಣೆ’ ಎಂದು <strong>ರೈತ ಕುಮಾರ್ ಪ್ರಶ್ನಿಸಿದ್ದಾರೆ.</strong></p>.<div><blockquote>ವಿದ್ಯುತ್ ಕಂಬ ಮುರಿದು ಬಿದ್ದು 3-4 ತಿಂಗಳಾಗಿದೆ. ಬೆಸ್ಕಾಂ ಅಧಿಕಾರಿಗಳಿಗೆ ಎಷ್ಟು ಬಾರಿ ದೂರು ನೀಡಿದರೂ ಪ್ರಯೋಜನ ಆಗಿಲ್ಲ </blockquote><span class="attribution">ಪಿಲ್ಲಪ್ಪ ರೈತ ಕೆಂಬಡಿಗಾನಹಳ್ಳಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಗಬಾಳ(ಹೊಸಕೋಟೆ): </strong>ರೈತರ ಜಮೀನಿನಲ್ಲಿರುವ ವಿದ್ಯುತ್ ಕಂಬಗಳು ಶಿಥಿಲಗೊಂಡು ವಿದ್ಯುತ್ ತಂತಿ ಬಾಗುತ್ತಿದೆ. ಕೆಲವೆಡೆ ತಂತಿಗಳು ತುಂಡರಿಸಿದ್ದು, ಅಪಾಯ ಆಹ್ವಾನಿಸುತ್ತಿದೆ.</p>.<p>ಮುಗಬಾಳ ಪಂಚಾಯಿತಿ ವ್ಯಾಪ್ತಿಯ ಕೆಂಬಡಿಗಾನಹಳ್ಳಿ ರೈತರ ತೋಟಗಳಲ್ಲಿ ವಿದ್ಯುತ್ ತಂತಿಗಳು ಕೈಗೆ ಸಿಗುವಷ್ಟು ಕೆಳೆಗೆ ನೇತಾಡುತ್ತಿವೆ. ಕಂಬ ಮುರಿದು ಬೀಳುವ ಸ್ಥಿತಿ ತಲುಪಿದೆ. ಈ ಬಗ್ಗೆ ಬೆಸ್ಕಾಂ ಅಧಿಕಾರಿಗಳಿಗೆ ಹಲವು ಬಾರಿ ಮನವಿ ನೀಡಿದರೂ ಕ್ಯಾರೇ ಎನ್ನುತ್ತಿಲ್ಲ. </p>.<p>ಈಚೆಗೆ ಮುಗಬಾಳ, ಜಡಿಗೇನಹಳ್ಳಿ, ಹೆತ್ತಕ್ಕಿ ಮೊದಲಾದ ಪಂಚಾಯಿತಿ ವ್ಯಾಪ್ತಿಯಲ್ಲಿ 40ಕ್ಕೂ ಹೆಚ್ಚು ರೈತರ ಅನಧಿಕೃತ ನೀರಾವರಿ ಪಂಪ್ಸೆಟ್ ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಕಾರ್ಯಾಚರಣೆ ನಡೆಸಿದ್ದರೂ, ಇದೇ ಗ್ರಾಮ ಪಂಚಾಯಿತಿ ವಿದ್ಯುತ್ ಕಂಬಗಳು ಹಾಗೂ ತಂತಿಗಳು ಅಪಾಯ ಸ್ಥಿತಿಯಲ್ಲಿದ್ದರೂ ನಿರ್ಲಕ್ಷ್ಯವಹಿಸಿದ್ದಾರೆ.</p>.<p><strong>‘</strong>ಈ ಹಿಂದೆಯೇ ಒಮ್ಮೆ ಕುರಿಗಾಹಿಗಳಿಗೆ ವಿದ್ಯುತ್ ಸ್ಪರ್ಶವಾಗಿ ಸ್ವಲ್ಪ ಅಂತರದಲ್ಲಿ ರಾಣಪಾಯದಿಂದ ಪಾರಾಗಿದ್ದಾರೆ. ಇಷ್ಟಾದರೂ ವಿದ್ಯುತ್ ತಂತಿ ಸರಿಪಡಿಸಿಲ್ಲ. ಶಿಥಿಲ ಕಂಬಗಳನ್ನು ಬದಲಿಸಿಲ್ಲ. ರೈತರ ಪ್ರಾಣಕ್ಕೆ ಬೆಲೆ ಇಲ್ಲವೇ’ ಕೆಂಬಡಿಗಾನಹಳ್ಳಿಯ ರೈತ ಮಹಿಳೆ ಕಮಲ ಪ್ರಶ್ನಿಸಿದ್ದಾರೆ.</p>.<p>‘ವಿದ್ಯುತ್ ಕಂಬಗಳು ತಂತಿ ಸಮೇತ ಬಾಗಿದೆ. ಪ್ರತಿನಿತ್ಯ ಈ ಭಾಗದ ಮೂಲಕವೇ ರೈತರು ತಮ್ಮ ಜಮೀನುಗಳಿಗೆ ಮತ್ತು ಜಾನುವಾರುಗಳ ಮೈ ತೊಳೆಯಲು ಕೆರೆಗೆ ತೆರಳಬೇಕಿದೆ. ಇಂಥ ಸಂದರ್ಭದಲ್ಲಿ ಏನಾದರೂ ಅನಾಹುತ ಸಂಭವಿಸಿದರೆ ಯಾರು ಹೊಣೆ’ ಎಂದು <strong>ರೈತ ಕುಮಾರ್ ಪ್ರಶ್ನಿಸಿದ್ದಾರೆ.</strong></p>.<div><blockquote>ವಿದ್ಯುತ್ ಕಂಬ ಮುರಿದು ಬಿದ್ದು 3-4 ತಿಂಗಳಾಗಿದೆ. ಬೆಸ್ಕಾಂ ಅಧಿಕಾರಿಗಳಿಗೆ ಎಷ್ಟು ಬಾರಿ ದೂರು ನೀಡಿದರೂ ಪ್ರಯೋಜನ ಆಗಿಲ್ಲ </blockquote><span class="attribution">ಪಿಲ್ಲಪ್ಪ ರೈತ ಕೆಂಬಡಿಗಾನಹಳ್ಳಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>