<p><strong>ಆನೇಕಲ್: </strong>ಬನ್ನೇರುಘಟ್ಟ ಜನತಾ ಕಾಲೊನಿಯಲ್ಲಿ ಒಂಟಿ ಮಹಿಳೆಯನ್ನು ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.</p><p>ಮಹಿಳೆಯನ್ನು ಕೊಂದ ಹಂತಕರು ಕೈ, ಕಾಲು ಮತ್ತು ರುಂಡವನ್ನು ಕತ್ತರಿಸಿ ತಮ್ಮೊಂದಿಗೆ ಕೊಂಡೊಯ್ದಿದ್ದಾರೆ. ನಗ್ನ ಮುಂಡವನ್ನು ಮಾತ್ರ ಗೋಣಿ ಚೀಲದಲ್ಲಿಟ್ಟು ಹೋಗಿದ್ದಾರೆ.</p><p>ಹತ್ಯೆಯಾಗಿರುವ ಮಹಿಳೆಯನ್ನು ಖಾಸಗಿ ಕಂಪನಿಯೊಂದರಲ್ಲಿ ಹೌಸ್ಕೀಪಿಂಗ್ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಗೀತಮ್ಮ ಎಂದು ಗುರುತಿಸಲಾಗಿದೆ. ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು ಅವರಿಗೆ ಮದುವೆಯಾಗಿ ಗಂಡನ ಜೊತೆ ವಾಸವಾಗಿದ್ದಾರೆ.</p><p>ಪತಿಯ ಸಾವಿನ ನಂತರ ಈಚೆಗೆ ಗೀತಮ್ಮ ಬನ್ನೇರುಘಟ್ಟದ ಜನತಾ ಕಾಲೊನಿಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದರು. ಒಂದು ಮನೆಯಲ್ಲಿ ತಾವು ವಾಸವಿದ್ದ ಗೀತಮ್ಮ, ಉಳಿದ ಎರಡು ಮನೆಗಳನ್ನು ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದ ಬಿಹಾರದ ಯುವಕರಿಗೆ ಬಾಡಿಗೆ ನೀಡಿದ್ದರು.</p><p>ಗುರುವಾರ ಬೆಳಗ್ಗೆ ಮನೆಯ ಸುತ್ತಮುತ್ತ ಕೆಟ್ಟ ವಾಸನೆ ಹರಡಿತ್ತು. ಇದರಿಂದ ಅನುಮಾನಗೊಂಡ ಅಕ್ಕಪಕ್ಕದ ಮನೆಯವರು ಪರಿಶೀಲಿಸಿದಾಗ ಕೈ ಕಾಲು ರುಂಡವಿಲ್ಲದ ದೇಹ ಮಾತ್ರ ಪತ್ತೆಯಾಗಿದೆ.</p><p>ಮನೆಯಲ್ಲಿ ಬಾಡಿಗೆಗೆ ಇದ್ದ ಬಿಹಾರ ಮೂಲದ ಯುವಕರು ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ಅವರ ಫೋನ್ ಸ್ವೀಚ್ಆಫ್ ಆಗಿರುವುದು ಅನುಮಾನ ಮೂಡಿಸಿದೆ. ಎರಡು, ಮೂರು ದಿನಗಳ ಹಿಂದೆ ಈ ಕೃತ್ಯ ನಡೆದಿರುವ ಅನುಮಾನ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯ, ಶ್ವಾನದಳ, ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಿದೆ.</p><p>ಘಟನಾ ಸ್ಥಳಕ್ಕೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿದ್ದರು. ‘ಹತ್ಯೆಯ ಬಗ್ಗೆ ಎಲ್ಲಾ ಆಯಾಮಗಳಲ್ಲಿ ತನಿಖೆ ಮಾಡಲಾಗುತ್ತಿದೆ. ಹಣ, ಆಭರಣಕ್ಕಾಗಿ ಹತ್ಯೆ ನಡೆದಿದೆಯೇ ಅಥವಾ ಅನ್ಯ ಕಾರಣಗಳಿಗಾಗಿ ಹತ್ಯೆ ನಡೆದಿದೆಯೇ ಎಂಬುದು ತನಿಖೆ ನಂತರ ತಿಳಿಯಲಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ಬನ್ನೇರುಘಟ್ಟ ಜನತಾ ಕಾಲೊನಿಯಲ್ಲಿ ಒಂಟಿ ಮಹಿಳೆಯನ್ನು ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.</p><p>ಮಹಿಳೆಯನ್ನು ಕೊಂದ ಹಂತಕರು ಕೈ, ಕಾಲು ಮತ್ತು ರುಂಡವನ್ನು ಕತ್ತರಿಸಿ ತಮ್ಮೊಂದಿಗೆ ಕೊಂಡೊಯ್ದಿದ್ದಾರೆ. ನಗ್ನ ಮುಂಡವನ್ನು ಮಾತ್ರ ಗೋಣಿ ಚೀಲದಲ್ಲಿಟ್ಟು ಹೋಗಿದ್ದಾರೆ.</p><p>ಹತ್ಯೆಯಾಗಿರುವ ಮಹಿಳೆಯನ್ನು ಖಾಸಗಿ ಕಂಪನಿಯೊಂದರಲ್ಲಿ ಹೌಸ್ಕೀಪಿಂಗ್ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಗೀತಮ್ಮ ಎಂದು ಗುರುತಿಸಲಾಗಿದೆ. ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು ಅವರಿಗೆ ಮದುವೆಯಾಗಿ ಗಂಡನ ಜೊತೆ ವಾಸವಾಗಿದ್ದಾರೆ.</p><p>ಪತಿಯ ಸಾವಿನ ನಂತರ ಈಚೆಗೆ ಗೀತಮ್ಮ ಬನ್ನೇರುಘಟ್ಟದ ಜನತಾ ಕಾಲೊನಿಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದರು. ಒಂದು ಮನೆಯಲ್ಲಿ ತಾವು ವಾಸವಿದ್ದ ಗೀತಮ್ಮ, ಉಳಿದ ಎರಡು ಮನೆಗಳನ್ನು ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದ ಬಿಹಾರದ ಯುವಕರಿಗೆ ಬಾಡಿಗೆ ನೀಡಿದ್ದರು.</p><p>ಗುರುವಾರ ಬೆಳಗ್ಗೆ ಮನೆಯ ಸುತ್ತಮುತ್ತ ಕೆಟ್ಟ ವಾಸನೆ ಹರಡಿತ್ತು. ಇದರಿಂದ ಅನುಮಾನಗೊಂಡ ಅಕ್ಕಪಕ್ಕದ ಮನೆಯವರು ಪರಿಶೀಲಿಸಿದಾಗ ಕೈ ಕಾಲು ರುಂಡವಿಲ್ಲದ ದೇಹ ಮಾತ್ರ ಪತ್ತೆಯಾಗಿದೆ.</p><p>ಮನೆಯಲ್ಲಿ ಬಾಡಿಗೆಗೆ ಇದ್ದ ಬಿಹಾರ ಮೂಲದ ಯುವಕರು ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ಅವರ ಫೋನ್ ಸ್ವೀಚ್ಆಫ್ ಆಗಿರುವುದು ಅನುಮಾನ ಮೂಡಿಸಿದೆ. ಎರಡು, ಮೂರು ದಿನಗಳ ಹಿಂದೆ ಈ ಕೃತ್ಯ ನಡೆದಿರುವ ಅನುಮಾನ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯ, ಶ್ವಾನದಳ, ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಿದೆ.</p><p>ಘಟನಾ ಸ್ಥಳಕ್ಕೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿದ್ದರು. ‘ಹತ್ಯೆಯ ಬಗ್ಗೆ ಎಲ್ಲಾ ಆಯಾಮಗಳಲ್ಲಿ ತನಿಖೆ ಮಾಡಲಾಗುತ್ತಿದೆ. ಹಣ, ಆಭರಣಕ್ಕಾಗಿ ಹತ್ಯೆ ನಡೆದಿದೆಯೇ ಅಥವಾ ಅನ್ಯ ಕಾರಣಗಳಿಗಾಗಿ ಹತ್ಯೆ ನಡೆದಿದೆಯೇ ಎಂಬುದು ತನಿಖೆ ನಂತರ ತಿಳಿಯಲಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>