ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯಗೆ ಅನಂತ ಕುಮಾರ್‌ ಎರಡು ಪ್ರಶ್ನೆ

ಹ್ಯೂಬ್ಲೋ ವಾಚ್‌ ಕುರಿತು ಪ್ರಸ್ತಾಪ
Last Updated 9 ಮೇ 2018, 10:22 IST
ಅಕ್ಷರ ಗಾತ್ರ

ಶಿರಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಅನಂತ ಕುಮಾರ್ ಎರಡು ಪ್ರಶ್ನೆ ಹಾಕಿದರು.

'ಸಿದ್ದರಾಮಯ್ಯ ಅವರೇ ಕಟ್ಟಿರುವ ಹ್ಯುಬ್ಲೋ ವಾಚ್‌ನ ಕಸ್ಟಮ್ ಡ್ಯೂಟಿ ಕಟ್ಟಿದ್ದೀರಾ? ಪಾವತಿಸಿದ್ದರೆ ಅದಕ್ಕೆ ಸಂಬಂಧಿಸಿದ ದಾಖಲೆ ನೀಡಬೇಕು. ಕಸ್ಟಮ್ಸ್ ತಪ್ಪಿಸಿ ಸ್ಮಗಲ್ ಮಾಡಿ ತಂದಿರುವ ವಾಚ್ ಅದಲ್ಲ ಎಂದು 24 ಗಂಟೆಯೊಳಗೆ ಅವರು ದಾಖಲೆ ಬಿಡುಗಡೆ ಮಾಡಬೇಕು.

ಉತ್ತರಿಸದೇ ಇದ್ದಲ್ಲಿ ಬಾದಾಮಿ ಹಾಗೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸುಳ್ಳು ಪ್ರಚಾರ ಮಾಡುತ್ತಿರುವುದನ್ನು ಒಪ್ಪಿಕೊಂಡು ಕಣದಿಂದ ಹಿಂದೆ ಸರಿಯಬೇಕು' ಎಂದರು.

ಕುಮಾರಸ್ವಾಮಿ ಮತ್ತು ಅಮಿತ್ ಶಾ ಒಂದೇ ವಿಮಾನದಲ್ಲಿ ದೆಹಲಿಗೆ ಹೋಗಿದ್ದಾರೆ ಎನ್ನುವ ಸಿದ್ದರಾಮಯ್ಯ, ಅವರಲ್ಲಿರುವ ಸಾಕ್ಷಿಯನ್ನು ರಾಜ್ಯದ ಜನತೆ ಎದುರು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಅವರು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT