<p><strong>ಹೊಸಕೋಟೆ</strong>: ‘ಗ್ರಾಮೀಣ ಭಾಗದ ಜನರ ಬದುಕು ಸುಂದರವಾಗಿ ಅರಳಲು ಹಾಗೂ ಸದೃಢ ಆರೋಗ್ಯ ಕಾಪಾಡಲು ಪೌಷ್ಟಿಕ ಆಹಾರದ ಜತೆಗೆ ಶುದ್ಧ ಕುಡಿಯುವ ನೀರು ಸೇವನೆ ಅಗತ್ಯ’ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.</p>.<p>ತಾಲ್ಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಮುತ್ಕೂರು ಗ್ರಾಮದ ದಾಮೋದರ್ ನಗರದಲ್ಲಿ ಮುತ್ಕೂರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸಹಕಾರದೊಂದಿಗೆ ಬಮೂಲ್ನಿಂದ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಗ್ರಾಮೀಣ ಜನರ ಆರೋಗ್ಯದ ದೃಷ್ಟಿಯಿಂದ ಬಮೂಲ್ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸುತ್ತಿದೆ. ಆರೋಗ್ಯಯುತ ಸಮಾಜ ನಿರ್ಮಿಸುವ ಮೂಲಕ ಜನರ ಜೀವನವನ್ನು ಸಮೃದ್ಧಗೊಳಿಸುವ ಮಹತ್ವದ ಕಾರ್ಯ ಮಾಡುತ್ತಿದೆ ಎಂದರು.</p>.<p>ಬಮೂಲ್ ಉಪಾಧ್ಯಕ್ಷ ಕೆ.ಎಂ.ಎಂ. ಮಂಜುನಾಥ್ ಮಾತನಾಡಿ, ಹೈನುಗಾರಿಕೆಯಲ್ಲಿ ಮಹಿಳೆಯರ ಪಾತ್ರ ದೊಡ್ಡದಿದೆ. ಸಹಕಾರ ಕ್ಷೇತ್ರಕ್ಕೆ ಮಹಿಳೆಯರು ಪಾದಾರ್ಪಣೆ ಮಾಡುತ್ತಿರುವುದರಿಂದ ಆರ್ಥಿಕ ಮತ್ತು ಸಾಮಾಜಿಕವಾಗಿ ಮುನ್ನಡೆಯಲು ಸಾಧ್ಯವಾಗಿದೆ. ಹೈನುಗಾರಿಕೆಯು ಅಭಿವೃದ್ಧಿ ಪಥದಲ್ಲಿ ಸಾಗಿದೆ ಎಂದು ತಿಳಿಸಿದರು.</p>.<p>ಇದೇ ಸಂದರ್ಭದಲ್ಲಿ ಗ್ರಾಮಸ್ಥರಿಗೆ ಉಚಿತವಾಗಿ ಕುಡಿಯುವ ನೀರಿನ ಕ್ಯಾನ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ಮಂಜುಳಾ ವೆಂಕಟರಾಜ್, ಉಪಾಧ್ಯಕ್ಷೆ ಸುನಂದಮ್ಮ, ಪಂಚಾಯಿತಿ ಅಧ್ಯಕ್ಷೆ ಸುಷ್ಮಾ, ಉಪಾಧ್ಯಕ್ಷ ರಾಜ್ಕುಮಾರ್, ಸದಸ್ಯ ಅಕ್ರಂ, ಮುಖಂಡರಾದ ದೇವರಾಜ್, ಭೋದನಹೊಸಳ್ಳಿ ಪ್ರಕಾಶ್ ಹಾಜರಿದ್ದರು.</p>.<p class="Briefhead"><strong>ಹೈಮಾಸ್ಟ್ ದೀಪ ಉದ್ಘಾಟನೆ</strong></p>.<p>‘ದೇವಾಲಯ ನಿರ್ಮಾಣದಿಂದ ಗ್ರಾಮದಲ್ಲಿ ಸಾಮರಸ್ಯದ ಜೀವನ ಸಾಧ್ಯ. ಒಗ್ಗಟ್ಟಿನ ಬಾಳ್ವೆಗೆ ದೇವಾಲಯಗಳು ಸಹಕಾರಿಯಾಗಿವೆ’ ಎಂದುಶಾಸಕ ಶರತ್ ಬಚ್ಚೇಗೌಡ ಹೇಳಿದರು.</p>.<p>ತಾಲ್ಲೂಕಿನ ವಾಗಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಶೆಟ್ಟಿಹಳ್ಳಿಯಲ್ಲಿ ಶ್ರೀಜಗನ್ ಜ್ಯೋತಿದೇವಿ ದೇವಾಲಯ, ನೂತನ ಶಿಲಾ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಹಾಗೂ ಹೈಮಾಸ್ಟ್ ದೀಪದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.</p>.<p>ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆಯಾಗದಂತೆ ಪ್ರತಿಯೊಬ್ಬರು ಎಚ್ಚರವಹಿಸಬೇಕು. ದೇವಾಲಯಗಳು ಭಾವೈಕ್ಯ ಸಾರುವ ಕೇಂದ್ರಗಳಾಗಿದ್ದು ಆತ್ಮಶುದ್ಧಿಯೊಂದಿಗೆ ದೈವೀ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ದ್ವೇಷ, ಅಸೂಯೆ ಆಚೆಗಿನ ಬದುಕನ್ನು ಗ್ರಹಿಸಬೇಕು ಎಂದು ಸಲಹೆ ನೀಡಿದರು.</p>.<p>ವಾಗಟ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರವೀಶ್, ಸದಸ್ಯರಾದ ದೇವಶೆಟ್ಟಹಳ್ಳಿ ಕುಮಾರ್, ಮಾಕನಹಳ್ಳಿ ಮಧುಕುಮಾರ್, ರಾಮಚಂದ್ರ, ವಾಗಟ ಸಿದ್ದಪ್ಪ, ಕಣ್ಣೆಕಲ್ ಮೋಹನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ</strong>: ‘ಗ್ರಾಮೀಣ ಭಾಗದ ಜನರ ಬದುಕು ಸುಂದರವಾಗಿ ಅರಳಲು ಹಾಗೂ ಸದೃಢ ಆರೋಗ್ಯ ಕಾಪಾಡಲು ಪೌಷ್ಟಿಕ ಆಹಾರದ ಜತೆಗೆ ಶುದ್ಧ ಕುಡಿಯುವ ನೀರು ಸೇವನೆ ಅಗತ್ಯ’ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.</p>.<p>ತಾಲ್ಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಮುತ್ಕೂರು ಗ್ರಾಮದ ದಾಮೋದರ್ ನಗರದಲ್ಲಿ ಮುತ್ಕೂರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸಹಕಾರದೊಂದಿಗೆ ಬಮೂಲ್ನಿಂದ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಗ್ರಾಮೀಣ ಜನರ ಆರೋಗ್ಯದ ದೃಷ್ಟಿಯಿಂದ ಬಮೂಲ್ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸುತ್ತಿದೆ. ಆರೋಗ್ಯಯುತ ಸಮಾಜ ನಿರ್ಮಿಸುವ ಮೂಲಕ ಜನರ ಜೀವನವನ್ನು ಸಮೃದ್ಧಗೊಳಿಸುವ ಮಹತ್ವದ ಕಾರ್ಯ ಮಾಡುತ್ತಿದೆ ಎಂದರು.</p>.<p>ಬಮೂಲ್ ಉಪಾಧ್ಯಕ್ಷ ಕೆ.ಎಂ.ಎಂ. ಮಂಜುನಾಥ್ ಮಾತನಾಡಿ, ಹೈನುಗಾರಿಕೆಯಲ್ಲಿ ಮಹಿಳೆಯರ ಪಾತ್ರ ದೊಡ್ಡದಿದೆ. ಸಹಕಾರ ಕ್ಷೇತ್ರಕ್ಕೆ ಮಹಿಳೆಯರು ಪಾದಾರ್ಪಣೆ ಮಾಡುತ್ತಿರುವುದರಿಂದ ಆರ್ಥಿಕ ಮತ್ತು ಸಾಮಾಜಿಕವಾಗಿ ಮುನ್ನಡೆಯಲು ಸಾಧ್ಯವಾಗಿದೆ. ಹೈನುಗಾರಿಕೆಯು ಅಭಿವೃದ್ಧಿ ಪಥದಲ್ಲಿ ಸಾಗಿದೆ ಎಂದು ತಿಳಿಸಿದರು.</p>.<p>ಇದೇ ಸಂದರ್ಭದಲ್ಲಿ ಗ್ರಾಮಸ್ಥರಿಗೆ ಉಚಿತವಾಗಿ ಕುಡಿಯುವ ನೀರಿನ ಕ್ಯಾನ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ಮಂಜುಳಾ ವೆಂಕಟರಾಜ್, ಉಪಾಧ್ಯಕ್ಷೆ ಸುನಂದಮ್ಮ, ಪಂಚಾಯಿತಿ ಅಧ್ಯಕ್ಷೆ ಸುಷ್ಮಾ, ಉಪಾಧ್ಯಕ್ಷ ರಾಜ್ಕುಮಾರ್, ಸದಸ್ಯ ಅಕ್ರಂ, ಮುಖಂಡರಾದ ದೇವರಾಜ್, ಭೋದನಹೊಸಳ್ಳಿ ಪ್ರಕಾಶ್ ಹಾಜರಿದ್ದರು.</p>.<p class="Briefhead"><strong>ಹೈಮಾಸ್ಟ್ ದೀಪ ಉದ್ಘಾಟನೆ</strong></p>.<p>‘ದೇವಾಲಯ ನಿರ್ಮಾಣದಿಂದ ಗ್ರಾಮದಲ್ಲಿ ಸಾಮರಸ್ಯದ ಜೀವನ ಸಾಧ್ಯ. ಒಗ್ಗಟ್ಟಿನ ಬಾಳ್ವೆಗೆ ದೇವಾಲಯಗಳು ಸಹಕಾರಿಯಾಗಿವೆ’ ಎಂದುಶಾಸಕ ಶರತ್ ಬಚ್ಚೇಗೌಡ ಹೇಳಿದರು.</p>.<p>ತಾಲ್ಲೂಕಿನ ವಾಗಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಶೆಟ್ಟಿಹಳ್ಳಿಯಲ್ಲಿ ಶ್ರೀಜಗನ್ ಜ್ಯೋತಿದೇವಿ ದೇವಾಲಯ, ನೂತನ ಶಿಲಾ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಹಾಗೂ ಹೈಮಾಸ್ಟ್ ದೀಪದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.</p>.<p>ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆಯಾಗದಂತೆ ಪ್ರತಿಯೊಬ್ಬರು ಎಚ್ಚರವಹಿಸಬೇಕು. ದೇವಾಲಯಗಳು ಭಾವೈಕ್ಯ ಸಾರುವ ಕೇಂದ್ರಗಳಾಗಿದ್ದು ಆತ್ಮಶುದ್ಧಿಯೊಂದಿಗೆ ದೈವೀ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ದ್ವೇಷ, ಅಸೂಯೆ ಆಚೆಗಿನ ಬದುಕನ್ನು ಗ್ರಹಿಸಬೇಕು ಎಂದು ಸಲಹೆ ನೀಡಿದರು.</p>.<p>ವಾಗಟ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರವೀಶ್, ಸದಸ್ಯರಾದ ದೇವಶೆಟ್ಟಹಳ್ಳಿ ಕುಮಾರ್, ಮಾಕನಹಳ್ಳಿ ಮಧುಕುಮಾರ್, ರಾಮಚಂದ್ರ, ವಾಗಟ ಸಿದ್ದಪ್ಪ, ಕಣ್ಣೆಕಲ್ ಮೋಹನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>