<p><strong>ಸೂಲಿಬೆಲೆ(ಹೊಸಕೋಟೆ):</strong> ಆಕಸ್ಮಿಕವಾಗಿ ಬೆಂಕಿ ಬಿದ್ದು ಹೋಬಳಿಯ ಮುತ್ತಕದಹಳ್ಳಿಯಲ್ಲಿ ಬುಧವಾರ ಸಂಜೆ ರಾಗಿ ಹುಲ್ಲಿನ ಬಣವೆ ಬೆಂಕಿಗಾಹುತಿ ಆಗಿದೆ. </p>.<p>ಮುತ್ತಕದಹಳ್ಳಿ ಗ್ರಾಮದ ಮುನಿಕಾಟಪ್ಪ ಅವರಿಗೆ ಸೇರಿದ ಸುಮಾರು 10 ಲೋಡ್ ರಾಗಿ ಹುಲ್ಲು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವವರೆಗೂ ಗ್ರಾಮಸ್ಥರು ಬೆಂಕಿ ಆರಿಸಲು ಹರಸಾಹಸಪಟ್ಟರೂ, ಜ್ವಾಲೆಯನ್ನು ನಿಯಂತ್ರಣಕ್ಕೆ ತರಲು ಸಾಧ್ಯವಾಗಲಿಲ್ಲ.</p>.<p>ಮಾಹಿತಿ ಪಡೆದ ಅಗ್ನಿಶಾಮಕ ದಳ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರೂ ಆ ವೇಳೆಗೆ ಬಣವೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು. ಆದರೆ ಸುತ್ತಮುತ್ತಲಿದ್ದ ಇತರೆ ಹುಲ್ಲಿನ ಬಣವೆಗಳಿಗೆ ಬೆಂಕಿ ಹಬ್ಬದಂತೆ ತಡೆಯುವಲ್ಲಿ ಸಿಬ್ಬಂದಿ ಯಶಸ್ವಿಯಾದರು.</p>.<p>10 ಲೋಡ್ ಹುಲ್ಲು ಸಂಪೂರ್ಣ ಸುಟ್ಟು ಹೋಗಿರುವುದರಿಂದ ಸುಮಾರು ₹1.50 ಲಕ್ಷ ನಷ್ಟ ಸಂಭವಿಸಿದೆ ಮುನಿಕಾಟಪ್ಪ ಅಳಲು ತೋಡಿಕೊಂಡರು.</p>.<p>ಬೇಸಿಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಅರಣ್ಯ ಪ್ರದೇಶಗಳು, ಬೆಟ್ಟಗುಡ್ಡಗಳು ಹಾಗೂ ಹುಲ್ಲಿನ ಬಣವೆಗಳಲ್ಲಿ ಬೆಂಕಿ ಅವಘಡಗಳು ಹೆಚ್ಚಾಗುತ್ತಿರುವುದರಿಂದ ಅಗ್ನಿಶಾಮಕ ದಳ ಹೆಚ್ಚು ಜಾಗರೂಕರಾಗಿರಬೇಕು. ಮಾಹಿತಿ ದೊರಕಿದ ತಕ್ಷಣವೇ ಸ್ಥಳಕ್ಕೆ ಧಾವಿಸುವ ವ್ಯವಸ್ಥೆ ಇರಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೂಲಿಬೆಲೆ(ಹೊಸಕೋಟೆ):</strong> ಆಕಸ್ಮಿಕವಾಗಿ ಬೆಂಕಿ ಬಿದ್ದು ಹೋಬಳಿಯ ಮುತ್ತಕದಹಳ್ಳಿಯಲ್ಲಿ ಬುಧವಾರ ಸಂಜೆ ರಾಗಿ ಹುಲ್ಲಿನ ಬಣವೆ ಬೆಂಕಿಗಾಹುತಿ ಆಗಿದೆ. </p>.<p>ಮುತ್ತಕದಹಳ್ಳಿ ಗ್ರಾಮದ ಮುನಿಕಾಟಪ್ಪ ಅವರಿಗೆ ಸೇರಿದ ಸುಮಾರು 10 ಲೋಡ್ ರಾಗಿ ಹುಲ್ಲು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವವರೆಗೂ ಗ್ರಾಮಸ್ಥರು ಬೆಂಕಿ ಆರಿಸಲು ಹರಸಾಹಸಪಟ್ಟರೂ, ಜ್ವಾಲೆಯನ್ನು ನಿಯಂತ್ರಣಕ್ಕೆ ತರಲು ಸಾಧ್ಯವಾಗಲಿಲ್ಲ.</p>.<p>ಮಾಹಿತಿ ಪಡೆದ ಅಗ್ನಿಶಾಮಕ ದಳ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರೂ ಆ ವೇಳೆಗೆ ಬಣವೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು. ಆದರೆ ಸುತ್ತಮುತ್ತಲಿದ್ದ ಇತರೆ ಹುಲ್ಲಿನ ಬಣವೆಗಳಿಗೆ ಬೆಂಕಿ ಹಬ್ಬದಂತೆ ತಡೆಯುವಲ್ಲಿ ಸಿಬ್ಬಂದಿ ಯಶಸ್ವಿಯಾದರು.</p>.<p>10 ಲೋಡ್ ಹುಲ್ಲು ಸಂಪೂರ್ಣ ಸುಟ್ಟು ಹೋಗಿರುವುದರಿಂದ ಸುಮಾರು ₹1.50 ಲಕ್ಷ ನಷ್ಟ ಸಂಭವಿಸಿದೆ ಮುನಿಕಾಟಪ್ಪ ಅಳಲು ತೋಡಿಕೊಂಡರು.</p>.<p>ಬೇಸಿಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಅರಣ್ಯ ಪ್ರದೇಶಗಳು, ಬೆಟ್ಟಗುಡ್ಡಗಳು ಹಾಗೂ ಹುಲ್ಲಿನ ಬಣವೆಗಳಲ್ಲಿ ಬೆಂಕಿ ಅವಘಡಗಳು ಹೆಚ್ಚಾಗುತ್ತಿರುವುದರಿಂದ ಅಗ್ನಿಶಾಮಕ ದಳ ಹೆಚ್ಚು ಜಾಗರೂಕರಾಗಿರಬೇಕು. ಮಾಹಿತಿ ದೊರಕಿದ ತಕ್ಷಣವೇ ಸ್ಥಳಕ್ಕೆ ಧಾವಿಸುವ ವ್ಯವಸ್ಥೆ ಇರಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>