ಹಬ್ಬಗಳಿಗೆ ಮುನ್ನುಡಿಯಾಗಿ ನಾಗರ ಪಂಚಮಿ ಹಬ್ಬ ಬಂದಿದೆ. ಈ ದಿನ ನಾಗದೇವತೆಗಳನ್ನು ಮನಸ್ಸಿನಲ್ಲಿ ಪ್ರಾರ್ಥಿಸಿ ಹಾವಿಗೆ ಹಾಲೆರೆದು ಮನೆಯಲ್ಲಿ ಸಿಹಿ ತಿಂಡಿಗಳನ್ನು ಮಾಡಿ ಸಂಭ್ರಮಿಸಲಾಗುವುದು. ಅಣ್ಣ-ತಂಗಿಯ ಬಾಂಧವ್ಯವನ್ನು ತಿಳಿಸುವ ಹಬ್ಬ ಇದಾಗಿದೆ. ಈ ಹಬ್ಬದ ಬಳಿಕ ವರ ಮಹಾಲಕ್ಷ್ಮಿ, ರಕ್ಷಾಬಂಧನ, ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ದಸರಾ, ದೀಪಾವಳಿ ಹೀಗೆ ಸಾಲು-ಸಾಲು ಹಬ್ಬಗಳು ಬಂದು ಜನರ ಸಂಭ್ರಮ ಹೆಚ್ಚಿಸಲಿದೆ. ಮನೆಯವರೆಲ್ಲ ಸೇರಿ ಎಲ್ಲರಿಗೂ ಒಳಿತಾಗಲಿ ಎಂದು ನಾಗ ದೇವತೆಯಲ್ಲಿ ಪ್ರಾರ್ಥಿಸುತ್ತಾರೆ ಎಂದು ಪೂಜೆಯಲ್ಲಿ ತೊಡಗಿಸಿಕೊಂಡಿದ್ದ ವರಲಕ್ಷ್ಮೀ ಹೇಳಿದರು.