ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹಿರಿಯ ಕೆಎಎಸ್ ಅಧಿಕಾರಿ ಎನ್.ಎಂ.ನಾಗರಾಜ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಜಿ.ಪಂ. ಉಪ ಕಾರ್ಯದರ್ಶಿ ಕರಿಯಪ್ಪ ಅವರು ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.ಜಿಲ್ಲಾ ಪಂಚಾಯಿತಿ ಕಾರ್ಯಕ್ರಮಗಳನ್ನು ಪೂರ್ಣವಾಗಿ ಅನುಷ್ಠಾನಗೊಳಿಸಿ ಜಿಲ್ಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲಾಗುವುದು ಎಂದು ಸಿಇಒ ತಿಳಿಸಿದರು.