<p><strong>ಆನೇಕಲ್: </strong>ತಾಲ್ಲೂಕಿನಾದ್ಯಂತ ಮಂಗಳವಾರ ನಾಗಪಂಚಮಿಯನ್ನು ಸಡಗರ, ಸಂಭ್ರಮಗಳಿಂದ ಆಚರಿಸಲಾಯಿತು. ನಾಗರಕಲ್ಲು, ಹುತ್ತಕ್ಕೆ ಹಾಲೆರೆದು, ಪೂಜೆ ಸಲ್ಲಿಸಲಾಯಿತು.</p>.<p>ತಾಲ್ಲೂಕಿನ ವಿವಿಧೆಡೆ ನಾಗರಕಲ್ಲುಗಳಿಗೆ ಮಹಿಳೆಯರು ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಸುಬ್ರಮಣ್ಯೇಶ್ವರ ದೇವಾಲಯಗಳಲ್ಲಿ ಭಕ್ತರ ದಂಡು ಕಂಡು ಬಂತು. ಬೆಳಗಿನ ಜಾವದಿಂದಲೇ ದೇವಾಲಯಗಳಲ್ಲಿ ಧಾರ್ಮಿಕ ಕಾರ್ಯಕ್ರಮ ಆರಂಭವಾಗಿದ್ದವು.</p>.<p>ಪಟ್ಟಣದ ಕಂಬದ ಗಣಪತಿ ದೇವಾಲಯದ ಆವರಣದಲ್ಲಿರುವ ನಾಗರಕಲ್ಲುಗಳಿಗೆ ಭಕ್ತರು ಹಾಲೆರೆಯುವ ಮೂಲಕ ಭಕ್ತಿ ಸಮರ್ಪಿಸಿದರು. ಪಟ್ಟಣದ ಶಿವಾಜಿ ವೃತ್ತದ ನಾಗರಕಟ್ಟೆ, ಥಳೀ ರಸ್ತೆಯ ನಾಗರಕಲ್ಲು ಸೇರಿದಂತೆ ಎಲ್ಲಾ ನಾಗರ ದೇವಾಲಯಗಳಲ್ಲಿ ಪೂಜೆ ನಡೆದವು.</p>.<p>ತಾಲ್ಲೂಕಿನ ಹಾರಗದ್ದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯನಹಳ್ಳಿ ನಾಗರ ದೇವಾಲಯದಲ್ಲಿ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.</p>.<p>ತಾಲ್ಲೂಕಿನ ಗೇಶ್ವರ ಕ್ಷೇತ್ರ ಎಂದೇ ಹೆಸರಾಗಿರುವ ಕಿತ್ತಗಾನಹಳ್ಳಿಯ ನಾಗೇಶ್ವರ ದೇವಾಲಯದಲ್ಲಿ ಮಹಿಳೆಯರು ನಾಗರಕಲ್ಲುಗಳಿಗೆ ಪೂಜೆ ಸಲ್ಲಿಸಿ ಹಾಲೆರೆಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.</p>.<p>ಶ್ರೀವಲ್ಲಿ ಸಮೇತ ಸುಬ್ರಮಣ್ಯ ದೇವಾಲಯ, ಹೆನ್ನಾಗರದ ನಾಗಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ನಡೆದವು. ಪಟ್ಟಣದ ಬರಗೂರು ಪೇಟೆಯ ಶ್ರೀವಲ್ಲಿ ಸಮೇತ ಸುಬ್ರಮಣ್ಯ ದೇವಾಲಯದಲ್ಲಿ ಬೆಳಗಿನಿಂದಲೂ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬೆಲ್ಲದಾರತಿ ಸಲ್ಲಿಸಿ ಸ್ವಾಮಿಗೆ ಭಕ್ತಿ ಸಮರ್ಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ತಾಲ್ಲೂಕಿನಾದ್ಯಂತ ಮಂಗಳವಾರ ನಾಗಪಂಚಮಿಯನ್ನು ಸಡಗರ, ಸಂಭ್ರಮಗಳಿಂದ ಆಚರಿಸಲಾಯಿತು. ನಾಗರಕಲ್ಲು, ಹುತ್ತಕ್ಕೆ ಹಾಲೆರೆದು, ಪೂಜೆ ಸಲ್ಲಿಸಲಾಯಿತು.</p>.<p>ತಾಲ್ಲೂಕಿನ ವಿವಿಧೆಡೆ ನಾಗರಕಲ್ಲುಗಳಿಗೆ ಮಹಿಳೆಯರು ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಸುಬ್ರಮಣ್ಯೇಶ್ವರ ದೇವಾಲಯಗಳಲ್ಲಿ ಭಕ್ತರ ದಂಡು ಕಂಡು ಬಂತು. ಬೆಳಗಿನ ಜಾವದಿಂದಲೇ ದೇವಾಲಯಗಳಲ್ಲಿ ಧಾರ್ಮಿಕ ಕಾರ್ಯಕ್ರಮ ಆರಂಭವಾಗಿದ್ದವು.</p>.<p>ಪಟ್ಟಣದ ಕಂಬದ ಗಣಪತಿ ದೇವಾಲಯದ ಆವರಣದಲ್ಲಿರುವ ನಾಗರಕಲ್ಲುಗಳಿಗೆ ಭಕ್ತರು ಹಾಲೆರೆಯುವ ಮೂಲಕ ಭಕ್ತಿ ಸಮರ್ಪಿಸಿದರು. ಪಟ್ಟಣದ ಶಿವಾಜಿ ವೃತ್ತದ ನಾಗರಕಟ್ಟೆ, ಥಳೀ ರಸ್ತೆಯ ನಾಗರಕಲ್ಲು ಸೇರಿದಂತೆ ಎಲ್ಲಾ ನಾಗರ ದೇವಾಲಯಗಳಲ್ಲಿ ಪೂಜೆ ನಡೆದವು.</p>.<p>ತಾಲ್ಲೂಕಿನ ಹಾರಗದ್ದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯನಹಳ್ಳಿ ನಾಗರ ದೇವಾಲಯದಲ್ಲಿ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.</p>.<p>ತಾಲ್ಲೂಕಿನ ಗೇಶ್ವರ ಕ್ಷೇತ್ರ ಎಂದೇ ಹೆಸರಾಗಿರುವ ಕಿತ್ತಗಾನಹಳ್ಳಿಯ ನಾಗೇಶ್ವರ ದೇವಾಲಯದಲ್ಲಿ ಮಹಿಳೆಯರು ನಾಗರಕಲ್ಲುಗಳಿಗೆ ಪೂಜೆ ಸಲ್ಲಿಸಿ ಹಾಲೆರೆಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.</p>.<p>ಶ್ರೀವಲ್ಲಿ ಸಮೇತ ಸುಬ್ರಮಣ್ಯ ದೇವಾಲಯ, ಹೆನ್ನಾಗರದ ನಾಗಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ನಡೆದವು. ಪಟ್ಟಣದ ಬರಗೂರು ಪೇಟೆಯ ಶ್ರೀವಲ್ಲಿ ಸಮೇತ ಸುಬ್ರಮಣ್ಯ ದೇವಾಲಯದಲ್ಲಿ ಬೆಳಗಿನಿಂದಲೂ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬೆಲ್ಲದಾರತಿ ಸಲ್ಲಿಸಿ ಸ್ವಾಮಿಗೆ ಭಕ್ತಿ ಸಮರ್ಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>