ಬಿಜೆಪಿ ಮುಖಂಡ ಸಾರಥಿ ಸತ್ಯಪ್ರಕಾಶ್ ಮಾತನಾಡಿ, ನಾಲ್ಕು ತಾಲ್ಲೂಕುಗಳು ಬೆಂಗಳೂರು ಪಕ್ಕದಲ್ಲೇ ಇದ್ದರೂ ಅಭಿವೃದ್ಧಿಯಲ್ಲಿ ಮಾತ್ರ ದೂರವೇ ಉಳಿದಿದೆ. ನವ ಬೆಂಗಳೂರು ಯೋಜನೆಯಡಿ ಅಭಿವೃದ್ಧಿಪಡಿಸಲು ಗ್ರಾಮಾಂತರ ಜಿಲ್ಲೆ ಅರ್ಹತೆ ಹೊಂದಿದೆ. ಜಿಲ್ಲಾ ಕೇಂದ್ರದ ಕುರಿತು ಎಲ್ಲ ತಾಲ್ಲೂಕುಗಳ ಅಂಶಗಳನ್ನು ಪರಿಗಣಿಸಿ ಘೋಷಣೆ ಮಾಡಬೇಕಿದೆ. ದೊಡ್ಡಬಳ್ಳಾಪುರದಲ್ಲಿ ಉಪವಿಭಾಗಧಿಕಾರಿ ಕಚೇರಿ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಕ್ರೀಡಾಂಗಣ, ಕೈಗಾರಿಕಾ ಪ್ರದೇಶ, ಭೌಗೋಳಿಕ, ಶೈಕ್ಷಣಿಕ, ಸರ್ಕಾರಕ್ಕೆ ಹೆಚ್ಚು ಆದಾಯ ಸಂಗ್ರಹ ಮಾಡುವ ನಗರವಾಗಿದ್ದು ಎಲ್ಲಾ ಅಂಶಗಳನ್ನು ಸರ್ಕಾರ ಪರಿಗಣಿಸಬೇಕಿದೆ ಎಂದರು.