ಮನುಷ್ಯನ ದುರಾಸೆಯಿಂದಾಗಿ ಪ್ರಕೃತಿ ಆಪತ್ತಿಗೆ ಸಿಲುಕಿದೆ. ಇದರ ಪರಿಣಾಮವಾಗಿ ಅತಿವೃಷ್ಠಿ, ಅನಾವೃಷ್ಠಿ, ಭೂತಾಪ ಏರಿಕೆ, ಹವಾಮಾನ ವೈಪರಿತ್ಯ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಮುಂದಿನ ಭವಿಷ್ಯದ ದೃಷ್ಠಿಯಿಂದ ನದಿ, ಕೆರೆ, ಅರಣ್ಯ, ಸುತ್ತಮುತ್ತಲಿನ ಪರಿಸರದ ಸಂರಕ್ಷಣೆ ಮತ್ತು ಗಿಡ ಮರಗಳನ್ನು ಬೆಳೆಸುವುದಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.